ಶುಕ್ರವಾರ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ
ಬೆಂಗಳೂರು, ಜೂ.16: ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೊಸದಿಲ್ಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ಬೆಂಗಳೂರಿನ ಎಚ್ಎಎಲ್ ವಿಮಾಣ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಳಗ್ಗೆ 7 ಗಂಟೆಗೆ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ, ಕೇಂದ್ರ ಸಚಿವರೊಂದಿಗೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಖಾಸಗಿ ಸುದ್ದಿವಾಹಿನಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಕರ್ನಾಟಕ ಭವನದಿಂದ ಜಿಎಸ್ಟಿ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ, ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ಹೊಸದಿಲ್ಲಿಯಿಂದ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಅವರ ಅಧಿಕೃತ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿಸಲಾಗಿದೆ.
Next Story