ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ ಸರಕಾರಕ್ಕಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ಹೊಸದಿಲ್ಲಿ, ಜೂ. 23: ‘ಸರಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ನಮ್ಮ ಮುಂದಿಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಣೆ ನೀಡಿದ್ದಾರೆ.
ಗುರುವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅರಣ್ಯ ಸಚಿವ ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು' ಎಂದು ತಿಳಿಸಿದರು.
ವಿವರ ನೀಡಿದರೆ ತನಿಖೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ರಸ್ತೆ ಹಾಕಿದ ಥಾರ್ ಎರಡೇ ದಿನದಲ್ಲಿ ಕಿತ್ತುಹೋಗಿರುವ ಬಗ್ಗೆ ಯಾವ ರಸ್ತೆ ಮತ್ತು ಎಲ್ಲಿ ಕಳಪೆ ಕಾಮಗಾರಿ ಆಗಿದೆ ಎಂಬ ಕುರಿತು ವಿವರಗಳನ್ನು ನೀಡಿದರೆ ಕೂಡಲೇ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಅವರು ನುಡಿದರು.
Next Story