ಪಠ್ಯಪುಸ್ತಕದಲ್ಲಿ ಕನಕದಾಸರಿಗೆ ಅಪಮಾನ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಕಾಗಿನೆಲೆ ಈಶ್ವರಾನಂದಪುರಿ ಸ್ವಾಮೀಜಿ
ಬೆಂಗಳೂರು, ಜೂ.24: ರಾಜ್ಯದಲ್ಲಿ ಪರಿಷ್ಕøತ ಪಠ್ಯಕ್ಕೆ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಈ ಮಧ್ಯೆ ಪಠ್ಯಪುಸ್ತಕದಲ್ಲಿ ಕನಕದಾಸರಿಗೆ ಅಪಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಲ್ಲೋಡು ಬಳಿಯ ಕಾಗಿನೆಲೆ ಗುರುಪೀಠ ಶಾಖಾಮಠದ ಈಶ್ವರಾನಂದಪುರಿ ಸ್ವಾಮೀಜಿ ಪತ್ರ ಬರೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಬಳಿಯ ಕಾಗಿನೆಲೆ ಕನಕ ಗುರುಪೀಠ ಶಾಖಾ ಮಠದ ಈಶ್ವರಾನಂದ ಸ್ವಾಮೀಜಿ ಸಿಎಂ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿಸಿ ನಾಗೇಶ್ಗೆ ಪತ್ರ ಬರೆದಿದ್ದು, ಪರಿಷ್ಕೃತ ಪಠ್ಯದಲ್ಲಿ ಕನಕದಾಸರಿಗೆ ಅಪಮಾನವಾಗಿದ್ದು, ಪಠ್ಯದಲ್ಲಿ ಇರುವ ಲೋಪಗಳನ್ನು ಸರಿಪಡಿಸಿ ಪಠ್ಯ ಒದಗಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
Next Story