ಶಿಕ್ಷಕರ-ಪದವೀಧರ ಕ್ಷೇತ್ರದಿಂದ ಚುನಾಯಿತರಾದ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಜು.6: ವಿಧಾನಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿರುವ ಬಸವರಾಜ ಹೊರಟ್ಟಿ, ಪ್ರಕಾಶ್ ಹುಕ್ಕೇರಿ, ಹನುಮಂತ ನಿರಾಣಿ ಹಾಗೂ ಮಧು ಜಿ.ಮಾದೇಗೌಡ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಧಾನಪರಿಷತ್ತಿನ ಹಂಗಾಮಿ ಸಭಾಪತಿ ರಘುನಾಥ್ರಾವ್ ಮಲ್ಕಾಪುರೆ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವ ಹಾಗೂ ವಿಧಾನಪರಿಷತ್ತಿನ ಸಭಾ ನಾಯಕ ಕೋಟ ಶ್ರೀನಿವಾಸಪೂಜಾರಿ, ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story