ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ
photo credit- twitter
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಲಿ ಬಂದಿರುವ ಹಿನ್ನೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು (ಮಂಗಳವಾರ) ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಿಢೀರ್ ಭೇಟಿ ನೀಡಿದ ಗೃಹ ಸಚಿವರು, ಕೈದಿಗಳ ಬ್ಯಾರಕ್ಗಳನ್ನು ತಪಾಸಣೆ ನಡೆಸಿದ್ದಾರೆ.
ಅತಿ ಭದ್ರತಾ ಬ್ಯಾರಕ್ ಗಳಿಗೆ ಭೇಟಿ ನೀಡಿ, ಮಾದಕ ವಸ್ತು ಹಾಗೂ ಮೊಬೈಲ್ ಬಳಕೆ ಕುರಿತು ತಪಾಸಣೆ ಮಾಡಿದ ಸಚಿವರು ಬಳಿಕ ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಕೈದಿಗಳಿಗೆ ಸೂಚನೆ ನೀಡಿದ್ದಾರೆ.
ಕಾರಾಗೃಹದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜತೆ ಸಮಾಲೋಚನೆ ನಡೆಸಿ, ಜೈಲಿನ ಒಳಗೆ, ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಕ್ಷಣಾ ವ್ಯವಸ್ಥೆ, ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಸೂಕ್ತ ನಿರ್ದೇಶನ, ನೀಡಿದ್ದೇನೆ. ಇತ್ತೀಚೆಗೆ, ಶಿವಮೊಗ್ಗದ ಹರ್ಷ ಹತ್ಯೆಯ ಆರೋಪಿಗಳು, ಜೈಲಿನಿನಲ್ಲಿ ಮೊಬೈಲ್ ಫೋನ್ ಬಳಕೆ ಬಗ್ಗೆ ತನಿಖೆ ನಡೆಯುತ್ತಿದ್ದು, ಇದುವರೆಗೆ ಒಬ್ಬನನ್ನು ಬಂಧಿಸಲಾಗಿದೆ.
- ಆರಗ ಜ್ಞಾನೇಂದ್ರ, ಗೃಹ ಸಚಿವರು
Following allegations of corruption inside the central prison & recent social media posts from inside barracks of accused in Hindu activist Harsha's murder came to the fore , Karnataka Home minister pays a surprise visit to the Parapana Agrahara prison to take stock. pic.twitter.com/IvHDfmvmU8
— Deepak Bopanna (@dpkBopanna) July 12, 2022