ಬೆಂಗಳೂರು: ಪೊಲೀಸ್ ಆಯುಕ್ತರ ಕಚೇರಿ ಬಳಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಬೆಂಗಳೂರು, ಜು.25: ಸಂಬಂಧಿಕರ ವಂಚನೆ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಖ್ಯದ್ವಾರದ ಬಳಿ ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿಜಯಪುರ ಮೂಲದ ಸಿದ್ದರಾಮಗೌಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಗಳ ಮದುವೆಯ ವರದಕ್ಷಿಣೆ ವಿಷಯದಲ್ಲಿ ಬೀಗರಿಂದ ವಂಚನೆಯಾಗಿದ್ದು,ಅಮೃತಹಳ್ಳಿ ಠಾಣಾ ಪೊಲೀಸರು ಹಣ ಹಾಗೂ ಚಿನ್ನಾಭರಣ ಪಡೆದು ಮೋಸ ಮಾಡಿದ್ದು ನಮಗೆ ನ್ಯಾಯ ನೀಡಿಲ್ಲ. ಈ ಸಂಬಂಧ ಹಿರಿಯ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
Next Story