ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ
ಬೆಂಗಳೂರು, ಆ.6: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಚೇರಿಯಿಂದ ವಿವಿ ಸಿಂಡಿಕೇಟ್ ಸದಸ್ಯ ಮಾಡುವುದಾಗಿ ನಂಬಿಸಿ ವಂಚನೆಗೈದ ಆರೋಪ ಸಂಬಂಧ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಬಳ್ಳಾರಿ ಮೂಲದ ಸದರುಲ್ಲಾ ಖಾನ್ ಎಂದು ಪೊಲೀಸರು ಗುರುತಿಸಿದ್ದಾರೆ.
ರಾಜ್ಯಪಾಲರ ಅಧೀನ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದ ಆರೋಪಿ ಕೆಲವರನ್ನು ಸಂಪರ್ಕಿಸಿ ರಾಜ್ಯಪಾಲರ ಕಚೇರಿ ಹೆಸರು ಬಳಸಿಕೊಂಡು ವಂಚಿಸುತ್ತಿದ್ದ.ವಿಚಾರ ತಿಳಿದು ರಾಜ್ಯಪಾಲರ ಕಚೇರಿ ಸಿಬ್ಬಂದಿ ಪೊಲೀಸ್ ಠಾಣೆ ದೂರು ನೀಡಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಆರೋಪಿ ಸದರುಲ್ಲಾ ಖಾನ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Next Story