ವಕ್ಫ್, ಹಜ್ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ
ಬೆಂಗಳೂರು, ಆ.5: ವಿಧಾನ ಪರಿಷತ್ನ ಸರಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ವಕ್ಫ್, ಹಜ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನನೆಗುದಿಗೆ ಬಿದ್ದಿರುವ ಹಲವು ವಿಷಯಗಳ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಶುಕ್ರವಾರ ಶಾಸಕರ ಭವನದಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ವಿಧಾನ ಪರಿಷತ್ನ ಸರಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಬಿ.ಎಂ.ಫಾರೂಕ್, ಸದಸ್ಯರಾದ ಬಸವರಾಜ ಹೊರಟ್ಟಿ, ಆಯನೂರು ಮಂಜುನಾಥ್, ಕೆ.ಎ.ತಿಪ್ಪೇಸ್ವಾಮಿ, ಶಶಿಲ್ ನಮೋಶೀ, ಯು.ಬಿ.ವೆಂಕಟೇಶ್, ಎಸ್.ವಿ.ಸಂಕನೂರು, ಎಸ್.ರುದ್ರೇಗೌಡ, ಚನ್ನರಾಜ ಹಟ್ಟಿಹೋಳಿ, ರಾಜ್ಯ ಹಜ್ ಸಮಿತಿಯ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲ, ಇಒ ಸರ್ಫರಾಝ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story