ಬೆದರಿಕೆ ಆರೋಪ: ನಟ ದರ್ಶನ್ ವಿರುದ್ಧ ದೂರು ದಾಖಲು
ಬೆಂಗಳೂರು, ಆ.9:ಹಣಕಾಸಿನ ತೊಂದರೆಯಿಂದಾಗಿ ಚಿತ್ರೀಕರಣ ತಡವಾಗಿದ್ದಕ್ಕೆ ನಿರ್ಮಾಪಕನಿಗೆ ನಟ ದರ್ಶನ್ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿರ್ಮಾಪಕ ಭರತ್ ವಿಷ್ಣುಕಾಂತ್ ಎಂಬುವರು ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಎಂಬ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಧ್ರುವನ್ ಎಂಬುವರು ನಾಯಕ ನಟನಾಗಿ ನಟಿಸುತ್ತಿದ್ದಾರೆ.
ಹಣಕಾಸಿನ ತೊಂದರೆಯಿಂದಾಗಿ ಭರತ್ ಅವರು ಈ ಚಿತ್ರದ ಚಿತ್ರೀಕರಣವನ್ನು ತಡವಾಗಿ ಮಾಡುತ್ತಿರುವುದರಿಂದ ಬೇಸರಗೊಂಡ ಧ್ರುವನ್ ಈ ಬಗ್ಗೆ ನಟ ದರ್ಶನ್ ಅವರ ಬಳಿ ಹೋಗಿ ಹೇಳಿಕೊಂಡು ಅವರಿಂದ ಭರತ್ಗೆ ಕರೆ ಮಾಡಿಸಿದ್ದಾರೆ.ಆಗ ದರ್ಶನ್ ಅವರು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
Next Story