ಬೆಂಗಳೂರು: ‘ಗಾಂಧೀಜಿಯನ್ನು ಕೊಂದಿದ್ದು ನಾವೇ’ ಎಂದ ಹಿಂದೂ ಮಹಾಸಭಾ ಅಧ್ಯಕ್ಷನ ವಿರುದ್ಧ ದೂರು
ಬೆಂಗಳೂರು, ಆ.10: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರನ್ನು ಹತ್ಯೆ ಮಾಡಿದ್ದು, ನಾನೇ ಎಂದು ಹೇಳಿಕೆ ನೀಡಿರುವ ಆರೋಪದಡಿ ಹಿಂದೂ ಮಹಾಸಭಾದ ಅಧ್ಯಕ್ಷ ಎಸ್.ಸುಬ್ರಮಣ್ಯರಾಜು ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ದೂರು ಸಲ್ಲಿಕೆ ಮಾಡಿದ್ದು, ಹಿಂದೂ ಮಹಾಸಭಾದ ಅಧ್ಯಕ್ಷ ಎಸ್.ಸುಬ್ರಮಣ್ಯರಾಜು ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಆ.8ರಂದು ವಾಹಿನಿಯೊಂದರಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ಅಧ್ಯಕ್ಷ ಎಸ್.ಸುಬ್ರಮಣ್ಯರಾಜು, ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರನ್ನು ಕೊಂದಿದ್ದು ನಾನೇ ಎಂದು ಹೇಳಿಕೆ ನೀಡಿದ್ದಾನೆ.ಇಂತಹ ವ್ಯಕ್ತಿಗಳ ವಿರುದ್ಧ ದೇಶದ್ರೋಹ ಪ್ರಕರಣಗಳ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯ ಮಾಡಿದ್ದಾರೆ.
Next Story