ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದ ಪ್ರಕರಣ: ಚಾರ್ಜ್ಶೀಟ್ ಸಲ್ಲಿಕೆ
ಭರತ್ ಶೆಟ್ಟಿ - ಪ್ರಮುಖ ಆರೋಪಿ
ಬೆಂಗಳೂರು, ಆ.10: ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಠಾಣಾ ಪೊಲೀಸರು 8ನೆ ಎಸಿಎಂಎಂ ನ್ಯಾಯಾಲಯಕ್ಕೆ 450 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಚಾರ್ಜ್ಶೀಟ್ನಲ್ಲಿ 20 ಮಂದಿ ಪ್ರತ್ಯಕ್ಷದರ್ಶಿಗಳ ಹೇಳಿಕೆ, 89 ಜನರನ್ನು ಸಾಕ್ಷಿಯನ್ನಾಗಿಸಿದೆ. ಹಿಂದುತ್ವ ಸಂಘಟನೆಯೊಂದರ ಕಾರ್ಯಕರ್ತ ಭರತ್ ಶೆಟ್ಟಿ ಸಹಚರರಾದ ಶಿವಕುಮಾರ್, ಪ್ರದೀಪ್ಕುಮಾರ್ ಹಾಗೂ ಉಮಾದೇವಿ ಪ್ರಮುಖ ಆರೋಪಿಗಳಾಗಿದ್ದಾರೆ.
ರಾಜ್ಯದಲ್ಲಿ ತಾವು ಹೆಸರು ಮಾಡಬೇಕೆಂಬ ಉದ್ದೇಶದಿಂದ ರೈತ ನಾಯಕನಿಗೆ ಮಸಿ ಬಳಿದಿರುವುದಾಗಿ ಹೇಳಿದ ಬಗ್ಗೆ ಇದರಲ್ಲಿದೆ. ಆರೋಪಿಗಳು ಪರಸ್ಪರ ಮಾತನಾಡಿದ ಆಡಿಯೊ ಸಾಕ್ಷಿಯನ್ನು ಕೂಡ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Next Story