ನಟ ಅನಿರುದ್ಧ್ಗೆ ಕಿರುತೆರೆಯಿಂದ 2 ವರ್ಷ ನಿಷೇಧ: ನಿರ್ಮಾಪಕರ ಸಂಘದ ನಿರ್ಧಾರ
ಬೆಂಗಳೂರು: ಕನ್ನಡದ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್ನ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ.
'ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ' ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.
ಸಂಚಿಕೆ ನಿರ್ದೇಶಕರಾದ ಉತ್ತಮ್ ಮಧು ಅವನ್ನು ಶೂಟಿಂಗ್ ಸೆಟ್ನಲ್ಲಿ ಅನಿರುದ್ಧ್ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ನಟ ಅನಿರುದ್ಧ್ ಅವರ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದ್ದು, ಹೀಗಾಗಿ ಅವರನ್ನು ಸೀರಿಯಲ್ನಿಂದ ಕೈ ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ್, ನನ್ನ ವಿರುದ್ಧದ ನಿರ್ಮಾಪಕರ ಸಂಘದ ಆರೋಪ ಸುಳ್ಳು. ಅವರ ಮಕ್ಕಳ ಮೇಲೆ ಪ್ರಮಾಣ ಮಾಡಿ ನನ್ನ ವಿರುದ್ಧ ಆರೋಪ ಮಾಡಲಿ, ನಾನೂ ನನ್ನ ಮಕ್ಕಳ ತಲೆ ಮೇಲೆ ಕೈ ಇಟ್ಟು ಅದಕ್ಕೆಲ್ಲ ಉತ್ತರಗಳನ್ನು ಕೊಡುತ್ತೇನೆ ಎಂದು ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.
ಇದನ್ನೂ ಓದಿ... BBMP ಇಂಜಿನಿಯರ್ ಸೋಗಿನಲ್ಲಿ ಸಿಎಂ ಗೃಹ ಕಚೇರಿಗೆ ಪ್ರವೇಶಿಸಿದ ಆರೋಪಿಯ ಬಂಧನ