ಸಿಂ ಬೊಮ್ಮಾಯಿ ಭೇಟಿಯಾದ ಕೆಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಘನ್
ಬೆಂಗಳೂರು, ಸೆ.5: ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್, ಮುರುಘನ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.
ಅಧಿಕೃತ ಪ್ರವಾಸ ನಿಮಿತ್ತ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದ ಸಚಿವರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಸೌಹಾರ್ದ ಭೇಟಿಯಾದರು.
ಈ ಸಮಯದಲ್ಲಿ ಕೇಂದ್ರ ಸಚಿವರು ಪಶುಸಂಗೋಪನೆ, ಮೀನುಗಾರಿಕೆ ಇತ್ಯಾದಿ ವಿಷಯ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಿದರು.
Next Story