ಬೆಂಗಳೂರು: ‘ಗೋಮಾಂಸ’ ಶಂಕೆ ಹಿನ್ನೆಲೆ; ಬೈಕ್ಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.17:ಅಯತಪ್ಪಿ ಬಿದ್ದ ಬೈಕ್ನಲ್ಲಿ ಗೋಮಾಂಸ ಇದೆ ಎಂದು ಶಂಕೆ ವ್ಯಕ್ತಪಡಿಸಿ ಈಡೀ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತ ಮೆರೆದಿರುವ ಘಟನೆ ನಗರದ ಹೊರವಲಯದಲ್ಲಿ ವರದಿಯಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಆಯತಪ್ಪಿ ಬೈಕ್ ಸವಾರ ಕೆಳಗೆ ಬಿದ್ದಾಗ ಅದರಲ್ಲಿದ್ದ ಗೋಮಾಂಸ ರಸ್ತೆಯಲ್ಲಿ ಚೆಲ್ಲಿದೆ ಎಂದು ಸ್ಥಳೀಯರು ಬೈಕ್ಗೆ ಬೆಂಕಿ ಇಟ್ಟು ಸವಾರನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Next Story