ಬೆಂಗಳೂರು: ಕೆಎಸ್ಸಾರ್ಪಿ ಪೇದೆ ಆತ್ಮಹತ್ಯೆ
ಬೆಂಗಳೂರು, ಸೆ.28: ರಾಜ್ಯ ಮೀಸಲು ಪಡೆಯ (ಕೆಎಸ್ಸಾರ್ಪಿ) 4ನೆ ಬೆಟಾಲಿಯನ್ನಲ್ಲಿ ತರಬೇತಿ ನಿರತ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತರಬೇತಿ ಪಡೆಯುತ್ತಿದ್ದ ಪೇದೆ ಚಿಕ್ಕಪ್ಪ ಅಣ್ಣಪ್ಪ ಅಂಬಿ ಆತ್ಮಹತ್ಯೆಗೆ ಶರಣಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಪ್ಪ, ಆರು ತಿಂಗಳಿಂದ ಮಡಿವಾಳದಲ್ಲಿರುವ ಕೆಎಸ್ಸಾಆರ್ಪಿ 4ನೆ ಬೆಟಾಲಿಯನ್ನಲ್ಲಿ ತರಬೇತಿ ಪಡೆಯುತ್ತಿದ್ದರು. ಸೆ.25ರಂದು ಹೊರಗಡೆ ಹೋದಾಗ ನಾಪತ್ತೆಯಾಗಿದ್ದರು.
ಈ ಸಂಬಂಧ ಬೆಟಾಲಿಯನ್ನ ಹಿರಿಯ ಅಧಿಕಾರಿಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಸೆ.26ರಂದು ಸಂಜೆ ಬೆಟಾಲಿಯನ್ನ ಬ್ಯಾರಕ್ಗೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ ಚಿಕ್ಕಪ್ಪನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story