ರಸ್ತೆ ಗುಂಡಿ ಮುಚ್ಚಲು ವಿಫಲ: ಬಿಬಿಎಂಪಿಯ ಇಬ್ಬರು ಇಂಜಿನಿಯರ್ ಗಳ ಅಮಾನತು
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.29: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿರುವ ನಡುವೆ ಕರ್ತವ್ಯ ಲೋಪ ಆರೋಪದಡಿ ಬಿಬಿಎಂಪಿ ಇಬ್ಬರು ಇಂಜನಿಯರ್ ಗಳನ್ನು ಅಮಾನತು ಮಾಡಲಾಗಿದೆ.
ಬಿಬಿಎಂಪಿ ಪಶ್ಚಿಮ ವಿಭಾಗದ ಎಇಇ ಆಗಿರುವ ಎಂ.ಸಿ.ಕೃಷ್ಣೇಗೌಡ ಎಂಬುವರನ್ನು ಅಮಾನತು ಮಾಡಲಾಗಿದ್ದು, ಇಲ್ಲಿನ ಹೊಸ ಬಿಇಎಲ್ ರಸ್ತೆ ಯಲ್ಲಿ ಗುಂಡಿ ಮುಚ್ಚಲು ವಿಫಲರಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಅದೇ ರೀತಿ, ಮೇಲಾಧಿಕಾರಿಗಳ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಎ.ಇ.ವಿಷಕಂಠ ಮೂರ್ತಿ ಎಂಬುವರನ್ನು ಸೇವೆಯಿಂದ ಅಮಾನತು ಮಾಡಿ ಆಡಳಿತ ವಿಭಾಗದ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Next Story