ನವೆಂಬರ್ 1ರಂದು 'ಮನೆ, ಮನೆಗೆ ಕನ್ನಡ ಬಾವುಟ' ಅಭಿಯಾನ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: 'ನವೆಂಬರ್ 1 ರಂದು ನಮ್ಮ ಪಕ್ಷದಿಂದ ಮನೆಮನೆ ಮೇಲೆ ಕನ್ನಡ ಬಾವುಟ ಹಾರಿಸುವ ಸಂಕಲ್ಪ ಮಾಡಿದ್ದೇವೆ. ರಾಜ್ಯದ ಜನರು ಇದರಲ್ಲಿ ಭಾಗವಹಿಸಬೇಕು' ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಯಾನ ಸಂಬಂಧ ಬುಧವಾರ ಶಾಸಕರ ಸಭೆ ಕರೆಯಲಾಗಿದೆ. ಅದರಲ್ಲಿ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮದ ರೂಪುರೇಷೆ ಸಿದ್ಧ ಮಾಡುತ್ತೇವೆ' ಎಂದರು
ಚನ್ನಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬಿಡುಗಡೆ ಮಾಡಿದ್ದ ಹಣ ಸಿ.ಪಿ. ಯೋಗೇಶ್ವರ್ ತಡೆ ಹಿಡಿಯಲು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ''ಇಂತಹ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಅವರು ಖುಷಿಗೆ ಇಂತಹದ್ದನ್ನು ಮಾಡುತ್ತಿರುತ್ತಾರೆ. ಇದರಿಂದ ಚನ್ನಪಟ್ಟಣದಲ್ಲಿ ಮತ ಬೀಳೋದಿಲ್ಲ. ಅವರ ಖುಷಿಗೆ ಅದನ್ನು ಮಾಡಿಕೊಳ್ಳಲಿ ಬಿಡಿ'' ಎಂದು ಹೇಳಿದರು.
Next Story