ಪೇ ಸಿಎಂ ಜತೆ ‘Saycm’ ಅಭಿಯಾನ: ಪ್ರಿಯಾಂಕ್ ಖರ್ಗೆ
-

ಬೆಂಗಳೂರು, ಅ.18:ಬಿಜೆಪಿ ತಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಷ್ಟೊಂದು ಭರವಸೆ ಈಡೇರಿಸಿದೆ ಎಂದು ಪ್ರಶ್ನಿಸಲು ಪೇ ಸಿಎಂ ಜೊತೆಗೆ ‘ಸೇ-ಸಿಎಂ’ (ಹೇಳಿ ಸಿಎಂ) ಅಭಿಯಾನ ನಡೆಸಲಾಗುವುದು ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ತಮ್ಮ ಪ್ರಣಾಳಿಕೆಯಲ್ಲಿ 600ಕ್ಕೂ ಹೆಚ್ಚು ಭರವಸೆ ನೀಡಿದ್ದು, ಶೇ.10ರಷ್ಟು ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷ ಅಭಿಯಾನದ ಮೂಲಕ ಪ್ರಶ್ನೆ ಕೇಳುತ್ತಿದ್ದು, ಇಲ್ಲಿಯವರೆಗೂ ಸರಕಾರದಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದರು.
ಅಲ್ಲದೆ, ಪೇಸಿಎಂ ಅಭಿಯಾನದ ಜತೆಗೆ ನಾವು ಸೇ-ಸಿಎಂ ಅಭಿಯಾನ ನಡೆಸಲಾಗುತ್ತಿದೆ. ಇನ್ನೂ, ರಾಜ್ಯ ಸರಕಾರ ಮೂಕ ಬಸವನ ರೀತಿ ಕೂತರೆ ಆಗುವುದಿಲ್ಲ. ನೀವು ಈ ಪ್ರಣಾಳಿಕೆ ಮೂಲಕ ಜನರಿಂದ ಮತ ಹಾಕಿಸಿಕೊಂಡಿದ್ದೀರಿ. ಹೀಗಾಗಿ ನೀವು ಜನರಿಗೆ ಉತ್ತರಿಸಲೇ ಬೇಕು ಎಂದು ಅವರು ಹೇಳಿದರು.
ಪೇಸಿಎಂ ಅಭಿಯಾನದಲ್ಲಿ ಸಿಸಿಬಿ ನೊಟೀಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದುರ್ದೈವ ಎಂದರೆ ಪೇಸಿಎಂ ಅಭಿಯಾನ ಮಾಡಿದ್ದು ಯಾರು? ಪೋಸ್ಟರ್ ಅಂಟಿಸಿದವರು ಯಾರು ಎಂದು ಗೊತ್ತಿದೆ. ಆದರೂ ಇದರ ತನಿಖೆಯನ್ನು ಸಿಸಿಬಿಗೆ ನೀಡಿದ್ದಾರೆ. ಆದರೆ ಪಿಎಸ್ಸೈ ಹಗರಣ, ಕೆಪಿಟಿಸಿಎಲ್, ಪಿಡಬ್ಲ್ಯೂಡಿ ಅಕ್ರಮ ತನಿಖೆ ಬಗ್ಗೆ ನ್ಯಾಯಾಂಗ ತನಿಖೆ ಮಾಡುತ್ತಿಲ್ಲ ಎಂದರು.
ಇನ್ನೂ, ಯುವಕರಿಗೆ ಶಿಕ್ಷಣ, ಉದ್ಯೋಗ ನೀಡುವ ಬದಲು ಅವರ ಹೆಗಲಿಗೆ ಕೇಸರಿ ಶಾಲು ಹಾಕಿ ಅವರಿಗೆ ಧರ್ಮ ರಕ್ಷಕ ಹಾಗೂ ಗೋರಕ್ಷಕ ಎಂಬ ಬಿರುದು ನೀಡುತ್ತಿದ್ದಾರೆ. ಕಾಂಗ್ರೆಸ್ ಆರಂಭದಿಂದಲೂ ಬಿಜೆಪಿ ಯುವಕರ ದಾರಿ ತಪ್ಪಿಸುತ್ತಿದೆ, ಭವಿಷ್ಯದ ಜತೆ ಚೆಲ್ಲಾಟವಾಡಿ, ಅವರ ಭವಿಷ್ಯ ನಾಶ ಮಾಡುತ್ತಿದೆ ಎಂದು ಅವರು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
.@BJP4Karnataka is yet to answer the questions raised by @INCKarnataka & the common man about the unfulfilled promises made to the people.
— Siddaramaiah (@siddaramaiah) October 18, 2022
Mr @BSBommai, people are now asking #SayCM#NimHatraIdyaUttara pic.twitter.com/MLk34C51p5
#SayCM pic.twitter.com/SPzuRSAeXB
— INC Ramanagara District (@kangresramanag1) October 18, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.