ನಟ ಚೇತನ್ ವಿರುದ್ಧ ಬೆಂಗಳೂರಿನಲ್ಲೂ ದೂರು
ಬೆಂಗಳೂರು, ಅ.22: ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿರುವ ನಟ ಚೇತನ್, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಇಲ್ಲಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಸಂಘಪರಿವಾರದ ಕಾರ್ಯಕರ್ತರೊಬ್ಬರು, ದೂರು ಸಲ್ಲಿಸಿದ್ದು, ಹಿಂದೂದೇವರ ಹಾಗೂ ಸಂಸ್ಕೃತಿಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ದಾಖಲಿಸಿದ್ದಾರೆ.
ಇತ್ತೀಚಿಗೆ ಮಡಿಕೇರಿಯಲ್ಲೂ ವ್ಯಕ್ತಿಯೊಬ್ಬರು ಇದೇ ವಿಚಾರವಾಗಿ ಚೇತನ್ ವಿರುದ್ಧ ದೂರು ಸಲ್ಲಿಕೆ ಮಾಡಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದರು.
ಇದನ್ನೂ ಓದಿ: ನಟ ಚೇತನ್ಗೆ ಮಸಿ ಬಳಿಯಲು ತೆರಳುತ್ತಿದ್ದ ಸಂಘಪರಿವಾರದ 12 ಮಂದಿ ಕಾರ್ಯಕರ್ತರು ವಶಕ್ಕೆ
Next Story