ಎಂಎಸ್ಐಎಲ್ನಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ.ದೇಣಿಗೆ
ಬೆಂಗಳೂರು, ಅ. 29: ಕರ್ನಾಟಕ ರಾಜ್ಯ ಸರಕಾರದ ಸಂಸ್ಥೆಯಾದ ಮೈಸೂರ್ ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್(ಎಂಎಸ್ಐಎಲ್) ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂಪಾಯಿ ದೇಣಿಗೆ ನೀಡಿದೆ.
ಸಂಸ್ಥೆಯ ಅಧ್ಯಕ್ಷ, ಶಾಸಕ ಹರತಾಳು ಹಾಲಪ್ಪ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿಕಾಶ್ ಕುಮಾರ್ ವಿಕಾಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚೆಕ್ ಸಮರ್ಪಿಸಿದರು.
ಎಪ್ರಿಲ್ನಲ್ಲಿ ಸಂಸ್ಥೆಯು ಸಿಎಂ ಪರಹಾರ ನಿಧಿಗೆ 1 ಕೋಟಿ ರೂ. ನೀಡಿತ್ತು. ಹಾಗೂ ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಉಕ್ರೇನ್ನಲ್ಲಿ ಸಿಲುಕಿದ್ದರಾಜ್ಯದ ವಿದ್ಯಾರ್ಥಿಗಳನ್ನು ಕರೆತರುವ ಜವಾಬ್ದಾರಿ ಹೊತ್ತು ಸಂಸ್ಥೆ 58ಲಕ್ಷ ರೂ.ವಿನಿಯೋಗಿಸಿ ತನ್ನ ಸೇವಾ ತತ್ಪರತೆ ಮೆರೆದಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
Next Story