ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಅವಹೇಳನಕಾರಿ ಬರಹ: ಕ್ಷಮೆ ಯಾಚಿಸಿದ ಪತ್ರಕರ್ತ ವಿಶ್ವೇಶ್ವರ ಭಟ್
ಬೆಂಗಳೂರು, ನ.4: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕನ್ನಡ ದೈನಿಕ 'ವಿಶ್ವವಾಣಿ'ಯಲ್ಲಿ ಅವಹೇಳನಕಾರಿಯಾಗಿ ಬರೆದಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿ 'ವಿಶ್ವವಾಣಿ'ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ರಾಷ್ಟ್ರೀಯ ಮಹಿಳಾ(NCW) ಆಯೋಗದ ಎದುರು ಹಾಜರಾಗಿ ಕ್ಷಮೆ ಯಾಚಿಸಿದ್ದಾರೆ.
ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿರುವ ವಿಶ್ವೇಶ್ವರ ಭಟ್, ಬೇಷರತ್ ಕ್ಷಮೆಯಾಚಿಸಿದ್ದಲ್ಲದೆ, ರಾಷ್ಟ್ರಪತಿ ಅವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ವಿಶ್ವೇಶ್ವರ ಭಟ್ ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ. ಕ್ಷಮಾಪಣೆ ಪತ್ರದೊಂದಿಗೆ ಪ್ರಕರಣದ ವಿವರಗಳನ್ನು ರಾಷ್ಟ್ರೀಯ ಮಹಿಳಾ ಆಯೋಗವು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ತಿಳಿಸಿದ್ದಾರೆ.
'ಕನ್ನಡ ದಿನಪತ್ರಿಕೆ 'ವಿಶ್ವವಾಣಿ'ಯ ಪ್ರಧಾನ ಸಂಪಾದಕ ರಾಷ್ಟ್ರಪತಿ ಅವರನ್ನು ಅವಹೇಳನ ಮಾಡಿದ್ದಾರೆ' ಎಂದು ಮುಹಮ್ಮದ್ ಮಫಾಝ್ ಎಂಬವರು ಅಕ್ಟೋಬರ್ 9ರಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ 'ವಿಶ್ವವಾಣಿ'ಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿದ್ದ ಲೇಖನದ ಎರಡು ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದರು. ಜತೆಗೆ ಟ್ವೀಟ್ ಅನ್ನು ರಾಷ್ಟ್ರಪತಿ ಭವನದ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿದ್ದರು.
ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿಯಾಗಿ ಬರೆದುದರ ಬಗ್ಗೆ ಮಾಡಲಾಗಿದ್ದ ಪೋಸ್ಟ್ ಅನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಅಕ್ಟೋಬರ್ 26ರಂದು ಖುದ್ದಾಗಿ ಹಾಜರಾಗುವಂತೆ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಿತ್ತು. ಆದರೆ, ಭಟ್ ಸಮಯ ಕೇಳಿದ್ದರು ಹಾಗೂ ನವೆಂಬರ್ 2ರಂದು ಆಯೋಗದ ಎದುರು ಹಾಜರಾಗಿ ಕ್ಷಮೆಯಾಚಿಸಿದ್ದಾರೆ.
Here's your screenshot.
— Pikaso (@pikaso_me) October 21, 2022
⚡ Want to automatically post your tweets on Instagram? Visit https://t.co/6fIpjtsiEr. pic.twitter.com/GxPm88zqCm