ಕುರಿ, ಮೇಕೆ ಸಾಕಾಣಿಕೆದಾರರ ಮಹಾಮಂಡಲದಿಂದ ಸಿಎಂ ಬೊಮ್ಮಾಯಿಗೆ ಅಭಿನಂದನೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮಾಜಿ ಸಚಿವರಾದ ಎಚ್.ಎಂ. ರೇವಣ್ಣನವರ ನೇತೃತ್ವದಲ್ಲಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಲದಿಂದ ಸನ್ಮಾನಿಸಲಾಯಿತು.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿಗಾರರಿಗೆ 354 ಕೋಟಿ ರೂ.ಯಲ್ಲಿ 20 ಕುರಿ 1 ಮೇಕೆ ವಿತರಣಾ ಯೋಜನೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಹಾಮಂಡಳ ಅಧ್ಯಕ್ಷ ಶರಣು ಬಿ ತಳ್ಳಿಕೇರಿ, ಉಪಾಧ್ಯಕ್ಷ ಕಾಶಿನಾಥ್ ಹುಡೇದ, ಸೇರಿದಂತೆ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
Next Story