ಬೆಂಗಳೂರು | ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರ
ಬೆಂಗಳೂರು, ಡಿ.2: ಪಾರಿವಾಳ ಹಿಡಿಯಲು ಯತ್ನಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಹೈಟೆನ್ಶನ್ ವಿದ್ಯುತ್ ವಯರ್(Electric shock) ತಾಗಿದ್ದರಿಂದ ಇಬ್ಬರು ಬಾಲಕರು ತೀವ್ರವಾಗಿ ಗಾಯಗೊಂಡ ಘಟನೆ ನಗರದ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ಗುರುವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಸುಪ್ರೀತ್(12) ಮತ್ತು ಚಂದ್ರು(10) ಎಂಬವರು ಗಂಭೀರವಾಗಿ ಗಾಯಗೊಂಡ ಬಾಲಕರಾಗಿದ್ದಾರೆ.
ಪಾರಿವಾಳ ಹಿಡಿಯುವ ಹವ್ಯಾಸ ಹೊಂದಿರುವ ಇವರಿಬ್ಬರು ಗುರುವಾರ ಸಂಜೆ 6:30ರ ಸುಮಾರಿಗೆ ಪಾರಿವಾಳ ಹಿಡಿಯುವ ಯತ್ನದಲ್ಲಿ ಹೈಟೆನ್ಶನ್ ವಿದ್ಯುತ್ ವಯರ್ ಅನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಾರೆ. ಇದರಿಂದ ಇಬ್ಬರಿಗೂ ತೀವ್ರತರದ ಸುಟ್ಟ ಗಾಯಗಳಾಗಿವೆ. ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Next Story