ಬೆಂಗಳೂರು | ಸಿಗರೇಟು ಕೇಳುವ ನೆಪದಲ್ಲಿ ಬೇಕರಿ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಂಗಳೂರು, ಡಿ.10: ಇಲ್ಲಿನ ಎಚ್ಎಎಲ್ ಪೋಲಿಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿ ಬೇಕರಿಯೊಂದಕ್ಕೆ ನುಗ್ಗಿ ವ್ಯಾಪಾರಿಯ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಗಳನ್ನು ಆಶ್ವನಗರದ ಕಾರ್ತಿಕ್ (20), ಸಲ್ಮಾನ್ (23) ಹಾಗೂ ಮಾರತ್ತಹಳ್ಳಿಯ ಕಾರ್ತಿಕ್ (23) ಎಂದು ಗುರುತಿಸಲಾಗಿದೆ.
ಮೂವರು ತಮ್ಮ ಸ್ನೇಹಿತರ ಜೊತೆ ಸೇರಿ ಗುರುವಾರ ರಾತ್ರಿ ಬೇಕರಿಗೆ ನುಗ್ಗಿ ನವೀನ್ ಶೆಟ್ಟಿ ಹಾಗೂ ಪ್ರಜ್ವಲ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಎಚ್ಎಎಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಬೆಂಗಳೂರು: ಸಿಗರೇಟು ಕೇಳುವ ನೆಪದಲ್ಲಿ ಬೇಕರಿ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು
Next Story