ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಟ್ವೀಟ್; ಆರೋಪಿ ವೈಭವ್ ಗಣೇಶ್ ಬಂಧನ
ಬೆಂಗಳೂರು, ಡಿ. 22: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಟ್ವೀಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೊಡ್ಲು ಗೇಟ್ ನಿವಾಸಿ ವೈಭವ್ ಗಣೇಶ್ (20) ಬಂಧಿತ ಆರೋಪಿಯಾಗಿದ್ದು, ಈಶಾನ್ಯ ವಿಭಾಗದ ಸಿಇಎನ್ ಹಾಗೂ ದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಡಿ.10ರಂದು ದುಷ್ಕರ್ಮಿಯೊಬ್ಬ ತನ್ನ ಟ್ವಿಟರ್ ಖಾತೆಯಲ್ಲಿ, 'ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುತ್ತೇನೆ' ಎಂದು ಟ್ವೀಟ್ ಮಾಡಿದ್ದ. ಈ ಟ್ವೀಟ್ ಅನ್ನು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಗೂ ಟ್ಯಾಗ್ ಮಾಡಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದರು.
ಇದನ್ನೂ ಓದಿ: ಮಗಳ ಹುಟ್ಟುಹಬ್ಬ ಆಚರಣೆಗೆ ಸುವರ್ಣ ವಿಧಾನಸೌಧ ಬಾಡಿಗೆಗೆ ಕೊಡಿ: ಸ್ಪೀಕರ್ಗೆ ಪತ್ರ ಬರೆದ ವಕೀಲ!
Next Story