ಪಿಲ್ಲರ್ ದುರಂತ ಪ್ರಕರಣ: ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ಪೊಲೀಸರಿಂದ ನೋಟಿಸ್
ಬೆಂಗಳೂರು, ಜ.20: ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಮೃತಪಟ್ಟ ದುರಂತ ಸಂಬಂಧ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಝ್ ಪರ್ವೇಝ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಅದೇ ರೀತಿ, ನಮ್ಮ ಮೆಟ್ರೋ ಸಂಸ್ಥೆಯ 15 ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ಜ.19ರಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚಿಸಲಾಗಿತ್ತು. ಆದರೆ, ಅಂಜುಝ್ ಪರ್ವೇಝ್ ಅವರು ಅನಾರೋಗ್ಯದ ಕಾರಣ ವಿಚಾರಣೆಗೆ ಗೈರು ಹಾಜರಾಗಿದ್ದಾರೆ ಎಂದು ಗೋವಿಂದಪುರ ಠಾಣಾ ಪೊಲೀಸರು ಹೇಳಿದ್ದಾರೆ.
ಘಟನೆ ಕುರಿತಂತೆ ಎಫ್ಎಸ್ಎಲ್ ಹಾಗೂ ಸಿವಿಲ್ ತಜ್ಞರು ನೀಡಿರುವ ವರದಿಯನ್ನಾಧರಿಸಿ ಗೋವಿಂದಪುರ ಠಾಣಾ ಪೊಲೀಸರು ಮೆಟ್ರೋ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.ಶೀಘ್ರದಲ್ಲಿಯೇ ಮತ್ತಷ್ಟು ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
Next Story