ನಿವೇಶನ ಹಂಚಿಕೆಯಲ್ಲಿ ವಂಚನೆ ಆರೋಪ: ಬಿಜೆಪಿ ಎಂಎಲ್ಸಿ ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR
ಬೆಂಗಳೂರು: ಲೇಔಟ್ ನಿವೇಶನ ಹಂಚಿಕೆಯಲ್ಲಿ ಪಾಲುದಾರನಿಗೆ ವಂಚನೆ ಮಾಡಿರುವ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರ ಪತ್ನಿ ಮತ್ತು ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಜೆಪಿ ಎಂಎಲ್ಸಿ ಆರ್. ಶಂಕರ್ ಅವರ ಪತ್ನಿ ಧನಲಕ್ಷ್ಮಿ ಆರ್. ಶಂಕರ್ ಹಾಗೂ ಪುತ್ರ ಜ್ಯೋತಿರ್ ತೇಜೋಮಯಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ಇನ್ನೊರ್ವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
ಅಕ್ರಮವಾಗಿ 23 ಸೈಟ್ಗಳನ್ನು ಮಾರಾಟ ಮಾಡುವ ಮೂಲಕ ವಂಚನೆ ಮಾಡಿದ್ದಾರೆ ಎಂದು ಕಂಪೆನಿಯ ಪಾಲುದಾರರಾದ ಪ್ರಭಾವತಿ ಎಂಬುವರು ಇಂದಿರಾನಗರ ಠಾಣೆಗೆ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
Next Story