ಟರ್ಕಿ, ಸಿರಿಯಾದಲ್ಲಿ ಭೂಕಂಪ | ಕನ್ನಡಿಗರು ಸಿಲುಕಿದ್ದರೆ ಮಾಹಿತಿ ನೀಡಿ: ಸಿಎಂ ಬೊಮ್ಮಾಯಿ ಮನವಿ
ಬೆಂಗಳೂರು: ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
'ಅಲ್ಲಿರುವ ಕನ್ನಡಿಗರಿಗೆ ನೆರವಾಗಲು, ಅವರ ಕುರಿತು ಮಾಹಿತಿಯನ್ನು ಸರ್ಕಾರದ ಜೊತೆ ಹಂಚಿಕೊಳ್ಳುವಂತೆ ಅವರ ಸಂಬಂಧಿಕರ ಬಳಿ ಮನವಿ ಮಾಡುತ್ತೇನೆ' ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಟರ್ಕಿ, ಸಿರಿಯಾದಲ್ಲಿ ಭೂಕಂಪ: 5,000 ಗಡಿ ದಾಟಿದ ಮೃತಪಟ್ಟವರ ಸಂಖ್ಯೆ, ಅದಾನ ತಲುಪಿದ ಭಾರತದ ಪರಿಹಾರ ತಂಡ
ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ.
— Basavaraj S Bommai (@BSBommai) February 7, 2023
1/2 pic.twitter.com/9dw7vLOZCq