ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು: ಜೆಡಿಎಸ್ ನಾಯಕ ಹಾಗೂ ವಿಧಾನ ಪರಿಷತದ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಭೋಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.
‘ಭೋಜೇಗೌಡರು ಪ್ರದರ್ಶಿಸಿರುವ ಪತ್ರ ವೈದ್ಯರೊಬ್ಬರಿಗೆ ಬರೆದಿರುವುದು, ನಾನು ವೈದ್ಯ ಅಲ್ಲ, ಹೀಗಾಗಿ ಅದು ನನಗೆ ಬರೆದ ಪತ್ರವಲ್ಲ, ಇನ್ನು ಅವರು ಆರೋಪಿಸಿದ ಹೆಸರಿನ ವ್ಯಕ್ತಿ ನನ್ನ ಕಚೇರಿಯಲ್ಲೂ ಇಲ್ಲ. ಅವರಿಗೆ ದಾಖಲೆಯ ಮೇಲೆ ವಿಶ್ವಾಸವಿದ್ದರೆ ಹೆಸರನ್ನು ಏಕೆ ಅಡಗಿಸುತ್ತಿದ್ದಾರೆ?’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.-
ಇದನ್ನು ಓದಿ: ಏಮ್ಸ್ ಹುದ್ದೆ, ಎನ್ ಎಂಸಿ ಸದಸ್ಯತ್ವಕ್ಕೆ ಲಂಚ: ಪ್ರಹ್ಲಾದ್ ಜೋಶಿ ವಿರುದ್ಧ ಭೋಜೇಗೌಡ ಆರೋಪ
Wild allegations & heights of misleading the Public!
— Pralhad Joshi (@JoshiPralhad) February 7, 2023
First of all, this letter is marked to a Doctor and I am certainly not a Doctor.
There is no such employee in my office.
If you are so confident, why have you blurred the name & content of this letter? pic.twitter.com/NekgeRVbGJ