ಅರ್ಕಾವತಿ ರೀಡೂ | ನ್ಯಾ.ಕೆಂಪಣ್ಣ ವರದಿ ಸದನದಲ್ಲಿ ಮಂಡಿಸಲು ಯು.ಟಿ.ಖಾದರ್ ಆಗ್ರಹ
ಬೆಂಗಳೂರು, ಫೆ.24: ಬೆಂಗಳೂರಿನ ಅರ್ಕಾವತಿ ಬಡಾವಣೆಯ ‘ರೀಡೂ’ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಆಗ್ರಹಿಸಿದರು.
ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ವೇಳೆ ಪ್ರಸ್ತಾಪಿಸಿದ ಅವರು, ಅರ್ಕಾವತಿ ಬಡಾವಣೆಗೆ ಸಂಬಂಧಿಸಿದ ವಿಚಾರ ಕುರಿತು ಮುಖ್ಯಮಂತ್ರಿ ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. ಹೀಗಾಗಿ, ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿದರೆ ಸತ್ಯಾಸತ್ಯತೆ ಜನರಿಗೆ ತಿಳಿಯಲಿದೆ ಎಂದು ಒತ್ತಾಯಿಸಿದರು.
ಇದಕ್ಕೆ ದನಿಗೂಡಿಸಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಆಯೋಗದ ವರದಿ ಬಹಿರಂಗ ಪಡಿಸಬೇಕು ಎಂಬ ಒತ್ತಾಯ ತಮ್ಮದಾಗಿದೆ ಎಂದರು. ಆನಂತರ, ಕಾನೂನು ಸಚಿವ ಮಾಧುಸ್ವಾಮಿ ಅವರು, ಅಯೋಗದ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಒಪ್ಪಿಗೆ ಪಡೆದ ನಂತರ ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಹೀಗಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
Next Story