ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಸರಕಾರದ ಹೈಡ್ರಾಮ: ಎಚ್.ವಿಶ್ವನಾಥ್
-

ಬೆಂಗಳೂರು, ಮಾ. 8: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಸರಕಾರ ಹೈಡ್ರಾಮಾ ಮಾಡುತ್ತಿದೆ. ಆರೋಪಿ ವಿರೂಪಾಕ್ಷಪ್ಪ ಮಾಡಾಳ್ನಲ್ಲಿರುವುದು ಪೊಲೀಸರಿಗೆ ಗೊತ್ತಿದ್ದರೂ ಬಂಧಿಸದೇ ಬೆಂಗಳೂರಿನಲ್ಲಿ ಹುಡುಕುವ ನಾಟಕವಾಡಿದ್ದಾರೆ. ಈಗ ತುರ್ತಾಗಿ ಜಾಮೀನು ಸಹ ಕೊಡಿಸಲಾಗಿದೆ ಇದೆಲ್ಲ ಬಿಜೆಪಿ ಸರಕಾರದ ಹೈಡ್ರಾಮಾ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ದೂರಿದ್ದಾರೆ.
ಬುಧವಾರ ನಗರದ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದಲ್ಲಿ ಯಾವುದೇ ಸರಕಾರದ ವಕೀಲರ ನೇಮಕವಾಗಿಲ್ಲ. ತನಿಖಾ ತಂಡದಲ್ಲಿದ್ದ ಇಬ್ಬರು ಲೋಕಾಯುಕ್ತ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೈಕೋರ್ಟ್ ನೀಡಿರುವ ಜಾಮೀನು ವಿಚಾರವಾಗಿ ವಕೀಲರ ಸಂಘ ಸುಪ್ರೀಂ ಕೋರ್ಟ್ಗೆ ಪತ್ರ ಬರೆದಿರುವುದನ್ನು ಗಮನಿಸಬೇಕು. ಐವತ್ತು ವರ್ಷಗಳ ನನ್ನ ರಾಜಕಾರಣದಲ್ಲಿ ಒಬ್ಬ ಶಾಸಕನ ಮನೆಯಲ್ಲಿ ಇಷ್ಟೊಂದು ಹಣ ಸಿಗುತ್ತದೆ ಎಂದರೆ ಯಾವ ಮಟ್ಟಿನ ಅವ್ಯವಹಾರ, ಲೂಟಿ ನಡೆಯುತ್ತಿದೆ ಎಂಬುದನ್ನೂ ಊಹಿಸಲು ಅಸಾಧ್ಯ. ನಮ್ಮ ರಾಜ್ಯ ರಾಜಕಾರಣ ಎತ್ತ ಕಡೆ ಸಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ವಿರೂಪಾಕ್ಷಪ್ಪನ ಮನೆಯಲ್ಲಿ ಕೋಟಿ ಕೋಟಿ ರೂಪಾಯಿ ಸಿಕ್ಕಿಬಿದ್ದರೂ ರಾಜ್ಯ ಸರಕಾರ ಕಣ್ಮುಚ್ಚಿ ಕುಳಿತಿದೆ. ಮಾಡಾಳ್ ವಿರೂಪಾಕ್ಷಪ್ಪ ಶರಣಾಗತಿ ಆಗದೆ ಬಿಜೆಪಿ ಪಕ್ಷ ಮತ್ತು ಸರಕಾರವನ್ನು ಹರಾಕು ಹಾಕುತ್ತಿದ್ದಾರೆ. ನೈತಿಕತೆ ಇದ್ದಿದ್ದರೆ ಅವರು ಶಾಸಕ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು. ಈ ಬೆಳವಣಿಗೆಯಿಂದ ಜನರು ಇಡೀ ವ್ಯವಸ್ಥೆಯನ್ನು ಅನುಮಾನ ದೃಷ್ಟಿಯಿಂದ ನೋಡುವಂತಾಗಿದೆ. ಬಿಜೆಪಿ ಪಕ್ಷಕ್ಕೆ ಒಂದು ಘನತೆ ಇದೆ. ನಿಮ್ಮ ಈ ಕ್ರಿಮಿನಲ್ ಚಟುವಟಿಕೆಗಳಿಂದ ಪಕ್ಷವನ್ನು ಹರಾಜು ಹಾಕಬೇಡಿ ಎಂದು ಹೇಳಿದರು.
ಲಂಚ ಪ್ರಕರಣದಲ್ಲಿ ಮೊದಲ ಆರೋಪಿ ವಿರೂಪಾಕ್ಷಪ್ಪ ತಲೆಮರೆಸಿಕೊಂಡು ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಬೆಂಬಲಿಗರು ಮೆರವಣಿಗೆ ಮಾಡುತ್ತಾರೆ ಎಂದರೆ ಸರಕಾರ ಎಲ್ಲಿದೆ ಎನ್ನುವ ಪ್ರಶ್ನೆ ಮೂಡುತ್ತದೆ. ಮೆರವಣಿಗೆ ಮಾಡುವ ಅವಕಾಶ ಕೊಟ್ಟವರು ಯಾರು. ಪೊಲೀಸರ ಎದುರಿನಲ್ಲೇ ಆರೋಪಿಯ ಮೆರವಣಿಗೆ ನಡೆಯುತ್ತದೆ ಎಂದಾದರೆ ಬಿಜೆಪಿ ಸರಕಾರ ಭ್ರಷ್ಟಾಚಾರವನ್ನು ವೈಭವೀಕರಿಸುವ ಸ್ಥಿತಿಗೆ ಬಂದಿದೆಯೇ, ಮುಂದೆ ಒಬ್ಬ ಕ್ರಿಮಿನಲ್ ಕೂಡ ಇದೇ ರೀತಿ ನನಗೂ ಮೆರವಣಿಗೆಗೆ ಅವಕಾಶ ಮಾಡಿಕೊಡಿ ಎಂದು ಕೇಳಿದರೆ ಆಗಲೂ ಅವಕಾಶ ಕೊಡುವಿರಾ ಎಂದು ಎಚ್.ವಿಶ್ವನಾಥ್ ಪ್ರಶ್ನಿಸಿದರು.
ಭ್ರಷ್ಟಾಚಾರದ ರಾಜಕಾರಣ ನಡೆಸುತ್ತಿರುವವರು ಪ್ರಧಾನಿ ಮೋದಿ ಅವರ ವಿರೋಧಿಗಳು. ನರೇಂದ್ರ ಮೋದಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯ ಕೆಲವರು ಪ್ರಧಾನಿ ಮೋದಿ ಅವರ ವಿರೋಧಿಗಳಾಗಿದ್ದಾರೆ. ಫೋನ್ ಪೇ ಹೋಗಿ ಅಡಿಕೆ ಮರ ಪೇ ಆಗಿದೆ. ಬಿಜೆಪಿ ಸರಕಾರದಲ್ಲಿ ಶಾಸಕ ವಿರೂಪಾಕ್ಷಪ್ಪ ಮಾಡಾಳ ಅವರಂತಹ ತಳಿ ಬೇಕಾ ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಲೂಟಿಮಯ:
‘ಸರಕಾರದ ಬಹುತೇಕ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಶಾಸಕಾಂಗ ಭ್ರಷ್ಟಾಚಾರದ ಸಮುದ್ರವಾದರೆ ಕಾರ್ಯಾಂಗ ನದಿಯಾಗುತ್ತಿದೆ. ಘಜ್ನಿ, ಖಿಲ್ಜಿಗಿಂತ ಹೆಚ್ಚಾಗಿ ಐಎಎಸ್, ಐಪಿಎಸ್ಗಳು 35 ವರ್ಷಗಳವರೆಗೆ ಲೂಟಿ ಹೊಡೆಯುತ್ತಾರೆ. ಎಸ್ಕಾಂ, ನೀರಾವರಿ, ಅಂಬೇಡ್ಕರ್ ನಿಗಮ, ಬೋಡ್ರ್ಸ್ ಅಂಡ್ ಕಾರ್ಪೊರೇಷನ್, ವಸತಿ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಸರಕಾರ ಲೂಟಿಮಯವಾಗುತ್ತಿದೆ. ಇನ್ನೂ ಈ ಸರಕಾರ ಜೀವಂತವಾಗಿದೆಯಾ ಎಂದು ಜನರು ಪ್ರಶ್ನಿಸುವಂತಾಗಿದೆ. ನ್ಯಾಯಾಲಯ, ಅಧಿಕಾರಶಾಹಿಗಳ ಮೇಲೆ ಜನರ ನಿರೀಕ್ಷೆಗಳು ಹುಸಿಯಾಗಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ಬಹಳ ಜವಾಬ್ದಾರಿ ಇದೆ. ಲೋಕಾಯುಕ್ತ ಎಲ್ಲವನ್ನೂ ಕೈಗೆತ್ತಿಕೊಂಡು ತನಿಖೆ ನಡೆಸಬೇಕು’ ಎಂದು ಎಚ್.ವಿಶ್ವನಾಥ್ ಮನವಿ ಮಾಡಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.