Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ನಿಂದನೆ ಪ್ರಕರಣ: ಸಂಸದ...

ಮಹಿಳಾ ನಿಂದನೆ ಪ್ರಕರಣ: ಸಂಸದ ಮುನಿಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ಮಹಿಳಾ ಸಂಘಟನೆಗಳ ಆಗ್ರಹ

10 March 2023 10:15 PM IST
share
ಮಹಿಳಾ ನಿಂದನೆ ಪ್ರಕರಣ: ಸಂಸದ ಮುನಿಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ಮಹಿಳಾ ಸಂಘಟನೆಗಳ ಆಗ್ರಹ

ಬೆಂಗಳೂರು, ಮಾ.10: ಮಹಿಳೆಯೊಬ್ಬರು ಹಣೆಗೆ ಕುಂಕುಮ ಇಟ್ಟಿಲ್ಲ ಎಂಬ ವಿಚಾರಕ್ಕೆ ಸಂಸದ ಮುನಿಸ್ವಾಮಿ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯನ್ನು ನಿಂದಿಸಿರುವ ಪ್ರಕರಣ ಪ್ರಗತಿಪರ ಹಾಗೂ ಮಹಿಳಾ ಸಂಘಟನೆಗಳ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಸದರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಮಾ.8ರ ಮಹಿಳಾ ದಿನಾಚರಣೆಯಂದು ಕೋಲಾರದ ಮತ್ಯಾಲಪೇಟೆಯ ವಸ್ತು ಪ್ರದರ್ಶನ ಮೇಳವೊಂದಲ್ಲಿ ಘಟನೆ ನಡೆದಿದ್ದು, ಸಂಸದ ಮುನಿಸ್ವಾಮಿ ಹಲವು ಪ್ರಗತಿಪರ ಹೋರಾಟಗಾರರು ಅಸಮಾಧಾನ ಹೊರ ಹಾಕಿದ್ದಾರೆ.

ಈ ಕುರಿತು ಹಿರಿಯ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ಪ್ರತಿಕ್ರಿಯೆ ನೀಡಿದ್ದು, ಸಂಸದ ಮುನಿಸ್ವಾಮಿ ಅವರ ನಡೆ ಸಂವಿಧಾನ ವಿರೋಧಿ. ಪುರುಷ ಪ್ರಧಾನ ಚಿಂತನಾಕ್ರಮವನ್ನು ಹುಟ್ಟಿಸುವ ಕ್ರೌರ್ಯದ ಪರಮಾವಧಿ ಇದಾಗಿದ್ದು, ಒಬ್ಬ ಹೆಣ್ಣು ಏಕಾಂಗಿಯಾಗಿ ನಿಂತಿರುವಾಗ ನೀನು ಕುಂಕುಮ ಹಾಕಿದ್ದೀಯಾ, ನಿನ್ನ ಗಂಡ ಜೀವಂತವಿದ್ದಾನ ಎಂದು ಕೇಳುವ ಹಕ್ಕನ್ನು ಸಂವಿಧಾನ ಯಾವ ಸಂಸದನಿಗೂ ನೀಡಿಲ್ಲ. ಅವರಾಡಿದ ಮಾತುಗಳ ಬಗ್ಗೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದೇ ಆದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದಾದ ಮಾತುಗಳು ಇವಾಗಿವೆ. ಆದ್ದರಿಂದ ಅಮಾಯಕ ಹೆಣ್ಣಿನ ಮೇಲೆ ಬಹಿರಂಗವಾಗಿ ನಡೆಸಿದ ಈ ದೌರ್ಜನ್ಯವನ್ನು ನಾನೊಬ್ಬ ಲೇಖಕನಾಗಿ ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ ಮಾತನಾಡಿದ್ದು, ಮೊದಲನೆಯದಾಗಿ ಮುನಿಸ್ವಾಮಿ ಅವರಿಗೆ ಯಾವಾಗ ಎಲ್ಲಿ ಹೇಗೆ ಮಾತನಾಡಬೇಕೆಂಬ ಸೌಜನ್ಯವಿಲ್ಲ, ದುಡಿಯುವ ಮಹಿಳೆಯರು ಕೆಲಸದ ಅವಧಿಯಲ್ಲಿ ಕುಂಕುಮ, ಸೆರಗು ಇವುಗಳ ಬಗ್ಗೆ ತಲೆಕೆಡಿಸಿಕೊಂಡು ಕೂರಲಿಕ್ಕೆ ಆಗುವುದಿಲ್ಲ, ಗ್ರಾಮೀಣ ಮಹಿಳೆಯರು ಹೆಚ್ಚಾಗಿ ಬೆವರಿನಲ್ಲಿ ಕೆಲಸ ಮಾಡುವುದರಿಂದ ಇಂತಹ ಸಂದರ್ಭದಲ್ಲಿ ಕುಂಕುಮ ಅಳಿಸಿ ಹೋಗಿರಲೂಬಹುದಲ್ಲವೇ, ಕುಂಕುಮ ಇಟ್ಟುಕೊಂಡರೇ ಮಾತ್ರ ಹೆಣ್ಣು ಎನ್ನುವಂತಹ ಪೂರ್ವಗ್ರಹ ಮನಸ್ಥಿತಿ ಹೋಗಬೇಕು. ಕಾಲ ಬದಲಾಗಿದೆ. ಯಾವುದು ಇಲ್ಲದೆಯೇ ಮಹಿಳೆಯರು ಬದುಕುವಂತಹ ಕಾಲವಿದು. ಹಿಂದಿನ ಕಾಲದ ಸಂಪ್ರದಾಯಸ್ಥರೇ ಎಲ್ಲವನ್ನೂ ಧಿಕ್ಕರಿಸಿ ನಡೆಯುವಂತಹ ಈ ಹೊತ್ತಿನಲ್ಲಿ ಇಂತಹ ಅಸಮಂಜಸವಾದ ಪ್ರಶ್ನೆಗಳನ್ನು ಕೇಳುವ ಅಗತ್ಯವಿರಲಿಲ್ಲ. ಮುಂದಾದರೂ ಪುರುಷರು ಮಹಿಳೆಯರ ಕುರಿತು ಮಾತನಾಡುವ ಮುನ್ನ ಯೋಚಿಸುವ ಅಗತ್ಯ ಇದೆ ಎಂದಿದ್ದಾರೆ.

ಇನ್ನು ಹಲವಾರು ಪ್ರಗತಿಪರ ಹೋರಾಟಗಾರರು, ಮಹಿಳಾ ಚಿಂತಕರು, ಸಾಹಿತಿಗಳು ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಸದರಿಗೆ ಕೂಡಲೇ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

share
Next Story
X