ಭವ್ಯ ನರಸಿಂಹಮೂರ್ತಿಗೆ ಕೈ ತಪ್ಪಿದ ಟಿಕೆಟ್: ಗಮನ ಸೆಳೆದ ಟ್ವೀಟ್
-

ಬೆಂಗಳೂರು: ರಾಜಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಯುವನಾಯಕಿ ಭವ್ಯಾ ನರಸಿಂಹಮೂರ್ತಿ ಅವರಿಗೆ ಭಾರೀ ನಿರಾಸೆ ಆಗಿದೆ. ಸಿಎಎ-ಎನ್ಆರ್ಸಿ ಪ್ರತಿಭಟನೆ ವೇಳೆ ಏಕಾಂಗಿಯಾಗಿ ಮಾಧ್ಯಮಗಳನ್ನು, ಪೊಲೀಸರನ್ನು ಎದುರಿಸಿ ಮಾಡಿದ ಭಾಷಣದಿಂದ ರಾತ್ರೋರಾತ್ರಿ ರಾಜ್ಯದ ಗಮನ ಸೆಳೆದಿದ್ದ ಭವ್ಯ ನರಸಿಂಹಮೂರ್ತಿ ಅವರಿಗೆ ರಾಜ್ಯದ ವಿವಿಧ ಭಾಗದಲ್ಲೂ ಅಭಿಮಾನಿಗಳಿದ್ದು, ಕಾಂಗ್ರೆಸ್ ಭವ್ಯಾರಂತಹ ಯುವ ನಾಯಕರುಗಳಿಗೆ ಟಿಕೆಟ್ ನೀಡಬೇಕೆಂಬ ಆಗ್ರಹ ಕೇಳಿ ಬಂದಿತ್ತು.
ಈ ನಡುವೆ, ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ಸಿಗೆ ಸೇರಿರುವ ಪುಟ್ಟಣ್ಣ ಅವರಿಗೆ ಟಿಕೆಟ್ ಅಂತಿಮಗೊಂಡಿದ್ದು, ಭವ್ಯಾ ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಉಂಟಾಗಿದೆ. ಸಾಮಾಜಿಕ ಮಾಧ್ಯಮದಲ್ಲೂ ಈ ಬಗ್ಗೆ ಚರ್ಚೆಗಳು ಆರಂಭವಾಗಿದೆ.
ಈ ನಡುವೆ ಭವ್ಯ ಅವರು ತಮ್ಮ ಅಭಿಮಾನಿಗಳಿಗಾಗಿ ಟ್ವೀಟ್ ಮಾಡಿದ್ದು, ನಾನು ನಿಮ್ಮನ್ನು ಹೆಮ್ಮೆ ಪಡುವಂತೆ ಮಾಡುತ್ತೇನೆ, ನಿಮ್ಮ ಬೆಂಬಲಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.
''ನನ್ನ ಗುರುತನ್ನು ಮಾಡಿಕೊಳ್ಳಲು ನಾನು ಇಲ್ಲಿದ್ದೇನೆ. ಒಂದು ಹಿನ್ನೆಡೆ ನನ್ನನ್ನು ತಡೆಯುವುದಿಲ್ಲ, ನಿಮ್ಮ ಅಭಿಮಾನ ಹಾಗೂ ಕಾಳಜಿಯ ಮಾತುಗಳಿಗೆ ಧನ್ಯವಾದ, ನಾನು ನಿಮಗಾಗಿ ನಿಲ್ಲುತ್ತೇನೆ, ನಿಮಗಾಗಿ ಹೋರಾಡುತ್ತೇನೆ, ನಿವು ನನ್ನ ಮೇಲೆ ಇಟ್ಟ ನಂಬಿಕೆ ಉಳಿಸಲು ಕಷ್ಟಪಟ್ಟು ದುಡಿಯುತ್ತೇನೆ, ನೀವೆಲ್ಲರೂ ಹೆಮ್ಮೆ ಪಡುವಂತೆ ಮಾಡುತ್ತೇನೆ'' ಎಂದು ಭವ್ಯ ಟ್ವೀಟ್ ಮಾಡಿದ್ದಾರೆ.
ಭವ್ಯಾಗೆ ಹಲವರು ಬೆಂಬಲ ಸೂಚಿಸಿದ್ದು, “ಇದು ಹಿನ್ನಡೆ ಅಲ್ಲ ಭವ್ಯ. ನಿಮ್ಮ ಪೂರ್ವಭಾವಿ ಪ್ರಭಾವ ಮತ್ತು ನಾಯಕತ್ವದ ಮೂಲಕ, ನೀವು ಬಹುತೇಕ ಅಲ್ಲಿದ್ದೀರಿ. 3-4 ವರ್ಷಗಳ ಸಕ್ರಿಯ ರಾಜಕಾರಣದಲ್ಲಿ ಅದೊಂದು ಸಾಧನೆ. ಶೀಘ್ರದಲ್ಲೇ ವಿಧಾನಸಬೆಯಲ್ಲಿ ನಿಮ್ಮನ್ನು ನೋಡುತ್ತೇವೆ. ಭರವಸೆ ಕಳೆದುಕೊಳ್ಳಬೇಡಿ.” ಎಂದು ಪ್ರಸಾದ್ ಎಂಬವರು ಟ್ವೀಟ್ ಮಾಡಿದ್ದಾರೆ.
I am here to stay and will make my mark. One setback cannot stop me.
— Bhavya Narasimhamurthy (@Bhavyanmurthy) March 25, 2023
Thanks for all your support and kind words.
I will
1. Stand for you,
2. Fight for you,
3. Work hard to keep up your trust in me
4. MAKE YOU ALL PROUD pic.twitter.com/FMvRbuCxAK
That's the spirit...don't worry small setbacks are tests for a grand finale...Something good n great ur way...wait
— Khadeer (@mkhadeerahmed) March 25, 2023
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.