ಬೆಂಗಳೂರು | ಸುಳ್ಳು ಆರೋಪ ಹೊರಿಸಿ ಇನ್ಸ್ ಪೆಕ್ಟರ್ ವಿರುದ್ಧ ರಾಷ್ಟ್ರಪತಿಗೆ ಪತ್ರ: ಇಬ್ಬರು ಕಾನ್ಸ್ಟೇಬಲ್ ಗಳ ಅಮಾನತು
ಬೆಂಗಳೂರು, ಮಾ.28: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಇಲ್ಲಸಲ್ಲದ ಆಪಾದನೆ ಮಾಡಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ.
ಶಿವಕುಮಾರ್, ವಿಜಯ್ ರಾಥೋಡ್ ಎಂಬುವರನ್ನು ಅಮಾನತು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
ಸುಬ್ರಹ್ಮಣ್ಯನಗರ ಠಾಣೆ ಇನ್ಸ್ ಪೆಕ್ಟರ್ ಶರಣಗೌಡ ವಿರುದ್ಧ ಪಬ್ ಮತ್ತು ಬಾರ್ ನಿಂದ ಮಾಮೂಲಿ ಪಡೆಯುತ್ತಾರೆ ಎಂದು ಆರೋಪಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಇದು ಸುಳ್ಳು ಆರೋಪ ಎಂದು ಸಾಬೀತಾದ ಹಿನ್ನೆಲೆ ಕಾನ್ಸ್ಟೇಬಲ್ ಗಳಾದ ಶಿವಕುಮಾರ್ ಹಾಗೂ ವಿಜಯ್ ರಾಥೋಡ್ರನ್ನು ಅಮಾನತು ಮಾಡಲಾಗಿದೆ.
ಈ ಸಂಬಂಧ ಮಲ್ಲೇಶ್ವರಂ ಠಾಣೆಯ ಎಸಿಪಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
Next Story