ಬೆಂಗಳೂರು: ಸರಕಾರಿ ಬಸ್ ಮೇಲೆ ಉರುಳಿಬಿದ್ದ ಮರ
ಪ್ರಯಾಣಿಕರು ಅಪಾಯದಿಂದ ಪಾರು
ಬೆಂಗಳೂರು, ಸೆ.3: ನಗರದ ಮಲ್ಲೇಶ್ವರಂನಲ್ಲಿ ಚಲಿಸುತ್ತಿದ್ದ ಸರಕಾರಿ ಸ್ವಾಮ್ಯದ ಐರಾವತ ಬಸ್ನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಶಿರಡಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಬಸ್ನಲ್ಲಿ 40 ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ರಸ್ತೆ ಮೇಲೆ ಬೃಹತ್ ಮರ ಉರುಳಿ ಬಿದ್ದ ಕಾರಣ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಬಿಬಿಎಂಪಿ ಸಿಬ್ಬಂದಿಗಳು ಮರ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
Next Story