ಪೌರಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಚಾಲನೆ
ಬೆಂಗಳೂರು, ನ.8: ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.
ದೇಶದಲ್ಲೇ ಮೊದಲ ಬಾರಿಗೆ ಇಂತಹ ಯೋಜನೆಗೆ ಬಿಬಿಎಂಪಿಯಲ್ಲಿ ಚಾಲನೆ ನೀಡಲಾಗಿದೆ. 32 ಸಾವಿರ ಪೌರ ಕಾರ್ಮಿಕರಿಗೆ ಬಿಸಿಯೂಟ ಒದಗಿಸುವ ಯೋಜನೆ ಇದಾಗಿದೆ. ಈ ಸಂದರ್ಭ ಸಚಿವರಾದ ಟಿ.ಬಿ.ಜಯಚಂದ್ರ, ಕೆ.ಜೆ.ಜಾರ್ಜ್, ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ, ಉಪಮೇಯರ್ ಮೊದಲಾದವರು ಉಪಸ್ಥಿತರಿದ್ದರು.
Next Story