ಹೊಸಕೋಟೆ: ರಕ್ತ ಚಂದನ ತುಂಡುಗಳಿದ್ದ ವಾಹನ ಪೊಲೀಸರ ವಶ
ಬೆಂಗಳೂರು, ಮೇ 13: ಹೊಸಕೋಟೆ-ಸೂಲಿಬೆಲೆ ಮಾರ್ಗದ ಲಕ್ಕೊಂಡಹಳ್ಳಿ ಸಮೀಪ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರಕ್ತ ಚಂದನ ತುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು ನಾಲ್ವರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಅಂದಾಜಿಸಿದ್ದು, ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
Next Story