ಜಂತಕಲ್ ಮೈನಿಂಗ್ ಪ್ರಕರಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್ಡಿಕೆ
ಬೆಂಗಳೂರು, ಜೂ.13: ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆಯೇ ಕುಮಾರಸ್ವಾಮಿ ಅವರು ಬಂಧನದ ಭೀತಿಯಿಂದಾಗಿ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಿರೀಕ್ಷಣಾ ಜಾಮೀನು ಅರ್ಜಿ ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಮಾಜಿ ಸಚಿವ ಜನಾರ್ದನರೆಡ್ಡಿ ಕೂಡ ಮಂಗಳವಾರವೇ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಿ ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಸಲ್ಲಿಸಿದ್ದರು.
Next Story