ಡಾಲಿ ಧನಂಜಯ್ ರ ʼಹೆಡ್ಬುಶ್ʼ ಸಿನಿಮಾ ಕುರಿತು ವಿವಾದ: ನಟ ಧನಂಜಯ್ ಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ
-

ಬೆಂಗಳೂರು: ಡಾಲಿ ಧನಂಜಯ್ ನಟನೆಯ ಮತ್ತು ನಿರ್ಮಾಣದ ಹೆಡ್ ಬುಶ್ ಚಿತ್ರ ಈಗಾಗಲೇ ರಾಷ್ಟ್ರಾದ್ಯಂತ ಉತ್ತಮವಾಗಿ ಪ್ರದರ್ಶನಗೊಳ್ಳುತ್ತಿದೆ. ಅಗ್ನಿ ಶ್ರೀಧರ್ ಬರೆದ ಕಥೆಯನ್ನು ಅಧರಿಸಿ ಡಾನ್ ಜಯರಾಜ್ ಕುರಿತು ಈ ಸಿನಿಮಾ ತಯಾರಿಸಲಾಗಿತ್ತು. ಇದೀಗ ಈ ಸಿನಿಮಾದ ಕುರಿತು ಬಲಪಂಥೀಯರು ಹಾಗೂ ಹಿಂದುತ್ವ ಸಂಘಟನೆಗಳು ವಿವಾದವೆಬ್ಬಿಸಿದ್ದು, ಹೆಡ್ಬುಶ್ ಚಿತ್ರದಲ್ಲಿ ಬೆಂಗಳೂರು ಕರಗಕ್ಕೆ ಮತ್ತು ವೀರಗಾಸೆ ನೃತ್ಯಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪಗಳನ್ನು ಚಿತ್ರತಂಡ ಅಲ್ಲಗಳೆದಿದೆ.
ಹಲವಾರು ಮಂದಿ ಬಲಪಂಥೀಯರು ಸಾಮಾಜಿಕ ತಾಣದಲ್ಲಿ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ರದಲ್ಲಿ ವೀರಗಾಸೆ ನೃತ್ಯಗಾರನಿಗೆ ಹೊಡೆಯುವ ದೃಶ್ಯವಿದೆ ಮತ್ತು ಬೆಂಗಳೂರು ಕರಗಕ್ಕೆ ಅವಮಾನವಾಗುವಂತೆ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ನಡುವೆ ಹಲವಾರು ಸಿನಿಮಾಭಿಮಾನಿಗಳು ಧನಂಜಯ್ ಬೆಂಬಲಕ್ಕೆ ನಿಂತಿದ್ದು, #WeStandWithDhananjay ಮತ್ತು #IStandWithDhananjay ಹ್ಯಾಶ್ಟ್ಯಾಗ್ ಟ್ವಿಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.
ಈ ಕುರಿತು ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದ ಧನಂಜಯ್ "ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದು, ವೀರಗಾಸಗೆ ಅವಮಾನಿಸುವ ಯಾವ ಅಂಶವು ಇಲ್ಲದಂತೆ ನೋಡಿಕೆೊಂಡಿದ್ದೇನೆ. ದೂಷಿಸುವವರು ದಯವಿಟ್ಟು ಸಿನಿಮಾ ನೋಡಿ ಕೂಲಂಕುಷವಾಗಿ ವಿಮರ್ಶಿಸಬೇಕಾಗಿ ಕೇಳಿಕೊಳ್ಳುತ್ತೇನೆ" ಎಂದು ತಾವು ಮಾತನಾಡುವ ವೀಡಿಯೊದ ಲಿಂಕ್ ಅನ್ನು ಪೋಸ್ಟ್ ಮಾಡಿದ್ದರು.
ಹಿಂದುತ್ವ ಸಂಘಟನೆಗಳು ವಿವಾದವೆಬ್ಬಿಸುತ್ತಿದ್ದಂತೆಯೇ ಹಲವಾರು ಕನ್ನಡ ಸಿನಿಮಾಭಿಮಾನಿಗಳು ಧನಂಜಯ್ ಬೆಂಬಲಕ್ಕೆ ನಿಂತಿದ್ದು, "ಮಾನವೀಯತೆಯ ಮಾತುಗಳನ್ನಾಡುವುದು ತಪ್ಪು ಹೇಗಾಗುತ್ತದೆ" ಎಂದು ಪ್ರಶ್ನಿಸಿದ್ದಾರೆ. "ಅವರು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಮಾಜವಾದ ಮತ್ತು ಜಾತ್ಯತೀತತೆಯನ್ನು ನಂಬುತ್ತಾರೆ. ನಾನು ಡಾಲಿ ಜೊತೆ ನಿಲ್ಲುತ್ತೇನೆ, ಹೆಡ್ಬುಶ್ ಸಿನಿಮಾವನ್ನು ಬೆಂಬಲಿಸುತ್ತೇನೆ" ಎಂದು ಹಲವರು ಟ್ವೀಟ್ ಮಾಡಿದ್ದಾರೆ.
"ಸಿನಿಮಾದೊಂದಿಗೆ ಧರ್ಮವನ್ನು ಎಳೆದು ತರುವುದು ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಆಗಿದೆ. ಇಂತಹಾ ವಿವಾದಗಳ ಕುರಿತು ತಲೆಕೆಡಿಸಿಕೊಳ್ಳಬೇಡಿ. ಚಿತ್ರರಂಗದಲ್ಲಿ ತಮ್ಮ ಶ್ರಮ ಮತ್ತು ಏಳುಬೀಳುಗಳನ್ನು ಕಂಡಿರುವ ನಾವು ನಿಮ್ಮನ್ನು ಸದಾ ಬೆಂಬಲಿಸುತ್ತೇವೆ" ಎಂದು ಇನ್ನೋರ್ವ ಬಳಕೆದಾರರು ಟ್ವೀಟ್ ಮಾಡಿದ್ದಾರೆ.
ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸಿನಿಮಾ ಗೀತೆ ರಚನೆಕಾರ ಕವಿರಾಜ್, "ಯಶ್ , ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ . ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. ಇದೀಗ ಪ್ರದರ್ಶನ ಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ. ಬಣ , ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ.
ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ. ಯಾವುದೋ ಪರಭಾಷಾ ಹಾಡಿನ ಟ್ಯೂನಿಗೆ ಹೋಲಿಕೆ ಇರುವ ಕಾರಣಕ್ಕೆ ಕಾಂತಾರ ಚಿತ್ರದ ಹಾಡಿಗೆ ಅಪಪ್ರಚಾರ ಮಾಡುತ್ತಿರುವವರಿಗೂ ಇದೇ ಮಾತು ಅನ್ವಯಿಸುತ್ತೆ . ಆ ಹಾಡುಗಳಲ್ಲಿ ಕೆಲವು ಸಾಮ್ಯತೆ ಇರಬಹುದೇ ಹೊರತು , ಇದು ಅದರ ನಕಲು ಖಂಡಿತಾ ಅಲ್ಲ ಎಂಬುದು ಎರಡು ದಶಕಕ್ಕು ಹೆಚ್ಚು ಕಾಲ ಒಬ್ಬ ಗೀತರಚನಾಕಾರನಾಗಿರುವ ನನ್ನ ಖಚಿತ ನಿಲುವು.
ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ ,ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಮತ್ತು ಹೆಡ್ ಬುಷ್ ನಿರ್ದೇಶಕರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ." ಎಂದು ಹೇಳಿದ್ದಾರೆ.
ಈ ಹಿಂದೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಟ್ವೀಟ್ ಒಂದಕ್ಕೆ ಪ್ರತಿಕ್ರಿಯಿಸಿದ್ದ ಧನಂಜಯ್ "ಏನಾದರೂ ಆಗು ಮೊದಲು ಮಾನವನಾಗು" ಎಂದು ಟ್ವೀಟಿಸಿದ್ದರು. ವಿವಾದದ ಈ ಸಂದರ್ಭದಲ್ಲಿ ಈ ಟ್ವೀಟ್ ಅನ್ನೂ ಎಳೆದು ತರಲಾಗಿದ್ದು, ಧನಂಜಯ್ ರ ಮಾನವೀಯ ನಿಲುವುಗಳಿಗಾಗಿ ಅವರನ್ನು ಗುರಿಪಡಿಸಲಾಗುತ್ತಿದೆ ಎಂದು ಹಲವರು ಅಭಿಪ್ರಾಯಿಸಿದ್ದಾರೆ.. ಸದ್ಯ ಹೆಡ್ ಬುಶ್ ಚಿತ್ರ ವಿಶ್ವದಾದ್ಯಂತ ಹಲವು ಸಿನಿಮಾ ಥಿಯೇಟರ್ ಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ.
ಚರ್ಚ್ ನ ಪಾದ್ರಿ ಅಥವಾ ಒಬ್ಬ ಮೌಲ್ವಿ ಬಟ್ಟೆ ಹಾಕಿಸಿ, ವಿಲನ್ ರೋಲ್ ಕೊಟ್ಟು ಫೈಟಿಂಗ್ ಸೀನ್ ಮಾಡೋ ತಾಕತ್ ಇದಿಯಾ
— ಶಕುಂತಲ/ Shakunthala (@ShakunthalaHS) October 25, 2022
ಇವರಿಗೆ.
ಪ್ರತಿ ಬಾರಿ ಹಿಂದೂಗಳ ಭಾವನೆಗಳಿಗೆ ದಕ್ಕೆ ಮತ್ತು ಹಿಂದೂ ದೇವರುಗಳೇ ಟಾರ್ಗೆಟ್ ಈ ಎಡಚರಿಗೆ.#BoycottHeadBush
ನಮ್ಮ ಧರ್ಮ ಸಂಸ್ಕೃತಿಯ ಮೇಲೆ ಆಗುತ್ತಿರುವ ನಿರಂತರ ದಾಳಿಯನ್ನು ನೋಡಿಯೂ ಸುಮ್ಮನಿದ್ದರೆ ನಾವು ಬದುಕ್ಕಿದ್ದು ಸತ್ತಂತೆ.
— ಶಕುಂತಲ/ Shakunthala (@ShakunthalaHS) October 26, 2022
ಕ್ರೌರ್ಯವನ್ನು ವೈಭವೀಕರಿಸುವ ಮದದಲ್ಲಿ ನಮ್ಮ ಸಂಸ್ಕೃತಿಯನ್ನು ಕೀಳಾಗಿ ತೋರಿಸುವ ಅಗತ್ಯವಿದೆಯೇ?
ಇಂದು ವೀರಭದ್ರ ನಾಳೆ,ಶಿವ,ರಾಮ,ಕೃಷ್ಣನ ವೇಷ ಹಾಕಿಸಿ ಬೂಟ್ ಕಾಲಿನಲ್ಲಿ ಒದೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. pic.twitter.com/pXibKvWMSx
ಬಡವರ ಮಕ್ಳು ಬೆಳೀಬೇಕ್ ಕಣ್ರಯ್ಯ#HeadBush#WeAreWithDhanajay#StandWitjDhananjay@Dhananjayaka pic.twitter.com/09YHahk1yn
— Basavaraj Pujar (@bpche_star) October 26, 2022
I was feeling bad that Zee Studios did not give #HeadBush a proper international release and now few groups have started to target #Dhananjaya for no reason. He will always have love and support from every KFI fan. Ignore the politics around it and enjoy the film as a film.
— Rohit Niranjan V (@RohitvNiranjan) October 26, 2022
ಅಗ್ನಿ ಶ್ರೀಧರ್ ಅಣ್ಣ #WeStandwithDhananjaya#KicchaSudeep#HeadBush #Dhananjaya@Dhananjayaka @KicchaSudeeppic.twitter.com/8fCW0KzfHQ
— (@BaadshahDHF) October 26, 2022
We Dboss fans are always with you
— tarak shashi M (@ShashimTarak) October 26, 2022
@Dhananjayaka anna , Stay Strong
ಬಡವರ ಮನೆ ಮಕ್ಕಳು ಬೆಳಿಬೇಕು - ಧನಂಜಯ @dasadarshan#D56 #Kranti #DBoss#HeadBush #Dhananjaya #KFI #WeStandWithDhananjaya pic.twitter.com/CpRTnhbJRq
Karthik Gowda, creative producer of Hombale Films (#KGF series, #Kantara) comes to #Dhananjaya’s defense by reminding audiences of the disclaimer at the beginning of the film after Dhananjaya’s latest film #HeadBush is accused of hurting religious sentiments. pic.twitter.com/6F3kKPxAUs
— Cinemania (@CinemaniaIndia) October 26, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.