Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಿಡುಗಡೆಯ ಮುನ್ನಾ ದಿನವೇ ಆನ್‌ಲೈನ್...

ಬಿಡುಗಡೆಯ ಮುನ್ನಾ ದಿನವೇ ಆನ್‌ಲೈನ್ ನಲ್ಲಿ 'ಪಠಾಣ್' ಸಿನೆಮಾ ಸೋರಿಕೆ

25 Jan 2023 12:32 PM IST
share
ಬಿಡುಗಡೆಯ ಮುನ್ನಾ ದಿನವೇ ಆನ್‌ಲೈನ್ ನಲ್ಲಿ ಪಠಾಣ್ ಸಿನೆಮಾ ಸೋರಿಕೆ

ಮುಂಬೈ: ಪೈರಸಿಯನ್ನು ತಡೆಯಬೇಕು ಎಂದು ಯಶ್‌ರಾಜ್ ಫಿಲಂಸ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿರುವ ಹೊರತಾಗಿಯೂ 'ಪಠಾಣ್' (Pathaan) ಚಿತ್ರ ಬಿಡುಗಡೆಯ ಮುನ್ನಾ ದಿನವೇ ಆನ್‌ಲೈನ್ ನಲ್ಲಿ ಸಿನೆಮಾ ಸೋರಿಕೆ ಆಗಿದೆ ಎಂದು ವರದಿಯಾಗಿದೆ.

ಶಾರೂಖ್ ಖಾನ್, ದೀಪಿಕಾ ಪಡುಕೋಣೆ ಹಾಗೂ ಜಾನ್ ಅಬ್ರಹಾಂ ನಾಯಕತ್ವದ 'ಪಠಾಣ್' ಚಿತ್ರ ಬುಧವಾರ ಸುಮಾರು 100 ದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಮೊದಲ ದಿನದ ಪ್ರದರ್ಶನಕ್ಕೇ ಈಗಾಗಲೇ 5 ಲಕ್ಷ ಮುಂಗಡ ಟಿಕೆಟ್‌ಗಳನ್ನು ಕಾಯ್ದಿರಿಸಲಾಗಿದ್ದು, ದಾಖಲೆಯ ಆದಾಯ ಗಳಿಸುವ ನಿರೀಕ್ಷೆಯನ್ನು 'ಪಠಾಣ್' ಚಿತ್ರ ಈಗಾಗಲೇ ಹುಟ್ಟಿಸಿದೆ. ಹೀಗಿದ್ದೂ ಚಿತ್ರವು ಕೆಲವು ಅಂತರ್ಜಾಲ ತಾಣಗಳಲ್ಲಿ ಲಭ್ಯವಿದೆ ಎಂದು Times Now ವರದಿ ಮಾಡಿದೆ. ಒಂದು ಅಂತರ್ಜಾಲ ತಾಣವು ತನ್ನಲ್ಲಿ ಬಿಡುಗಡೆಯಾಗಿರುವ 'ಪಠಾಣ್' ಚಿತ್ರದ ಆವೃತ್ತಿಯನ್ನು ಕ್ಯಾಮೆರಾದ ಆವೃತ್ತಿ ಎಂದು ಹೇಳಿಕೊಂಡಿದ್ದರೆ, ಮತ್ತೊಂದು ಅಂತರ್ಜಾಲ ತಾಣವು ಡಿವಿಡಿ ಪೂರ್ವ ಆವೃತ್ತಿ ಎಂದು ಹೇಳಿಕೊಂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ 'ಪಠಾಣ್' ಚಿತ್ರದ ನಿರ್ಮಾಣ ಸಂಸ್ಥೆ ಯಶ್‌ರಾಜ್ ಫಿಲಂಸ್, ಚಿತ್ರವನ್ನು ಚಿತ್ರಮಂದಿರಗಳಲ್ಲೇ ವೀಕ್ಷಿಸಿ ಎಂದು ಅಭಿಮಾನಿಗಳನ್ನು ಒತ್ತಾಯಿಸಿದ್ದು, ಚಿತ್ರದ ದೃಶ್ಯಾವಳಿಗಳನ್ನು ಚಿತ್ರೀಕರಿಸಿಕೊಂಡು ಸೋರಿಕೆ ಮಾಡುವುದರ ವಿರುದ್ಧ ಅವರಿಗೆ ಎಚ್ಚರಿಕೆ ನೀಡಿದೆ.

"ಬೃಹತ್ ಸಾಹಸಮಯ ಚಿತ್ರ ವೈಭವವನ್ನು ವೀಕ್ಷಿಸಲು ಸಿದ್ಧರಾಗಿದ್ದೀರಾ? ದಯವಿಟ್ಟು ಆ ಚಿತ್ರದ ವಿಡಿಯೊ ಚಿತ್ರೀಕರಣ ಮಾಡುವುದು, ಅವನ್ನು ಅಂತರ್ಜಾಲದಲ್ಲಿ ಹಂಚಿಕೊಳ್ಳುವುದು ಹಾಗೂ ಆ ಮೂಲಕ ಚಿತ್ರಕ್ಕೆ ಹಾನಿ ಮಾಡುವುದರಿಂದ ದೂರ ಉಳಿಯಿರಿ ಎಂದು ವಿನಮ್ರ ಮನವಿ ಮಾಡಿಕೊಳ್ಳುತ್ತೇವೆ. 'ಪಠಾಣ್' ಚಿತ್ರದ ಅನುಭವವನ್ನು ಚಿತ್ರಮಂದಿರಗಳಲ್ಲೇ ಅನುಭವಿಸಿ" ಎಂದು ಟ್ವೀಟ್ ಮಾಡಿರುವ ಯಶ್‌ರಾಜ್ ಫಿಲಂಸ್, ಪೈರಸಿಯನ್ನು ವರದಿ ಮಾಡಲು ಇಮೇಲ್ ವಿಳಾಸವನ್ನೂ ಅದರಲ್ಲಿ ಲಗತ್ತಿಸಿದೆ.

ಈಗಾಗಲೇ 5 ಲಕ್ಷ ಮುಂಗಡ ಟಿಕೆಟ್‌ಗಳ ಕಾಯ್ದಿರಿಸುವಿಕೆಯಿಂದ ಗಲ್ಲಾ ಪೆಟ್ಟಿಗೆಯನ್ನು ಸೂರೆ ಮಾಡಿರುವ 'ಪಠಾಣ್' ಚಿತ್ರ, 'ಬಾಹುಬಲಿ 2' ನಂತರ ಆ ಸಾಧನೆಯನ್ನು ಮಾಡಿರುವ ಎರಡನೆ ಚಿತ್ರ ಎಂಬ ಹಿರಿಮೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಬಿಡುಗಡೆಗೆ ಮುನ್ನವೇ ದಾಖಲೆ ಸೃಷ್ಟಿಸಿದ 'ಪಠಾಣ್' 

All set for the biggest action spectacle? A humble request to everyone to refrain from recording any videos, sharing them online and giving out any spoilers. Experience #Pathaan only in cinemas!
Book tickets for #Pathaan now - https://t.co/SD17p6wBSa | https://t.co/cM3IfW7wL7 pic.twitter.com/HmlEKuT6Wj

— Yash Raj Films (@yrf) January 24, 2023
share
Next Story
X