Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಲೇಖನಗಳು
  4. ಕಾಂಗ್ರೆಸ್‌ ಸಂಸ್ಥಾಪನಾ ದಿನ:...

ಕಾಂಗ್ರೆಸ್‌ ಸಂಸ್ಥಾಪನಾ ದಿನ: ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯುವ ಸಂಭ್ರಮ

ಡಿ.ಕೆ.ಶಿವಕುಮಾರ್ಡಿ.ಕೆ.ಶಿವಕುಮಾರ್28 Dec 2023 12:15 PM IST
share
ಕಾಂಗ್ರೆಸ್‌ ಸಂಸ್ಥಾಪನಾ ದಿನ: ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯುವ ಸಂಭ್ರಮ

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತವು ಬಹು ಸಂಸ್ಕೃತಿಯನ್ನೊಳಗೊಂಡು ವಿವಿಧತೆಯಲ್ಲಿ ಏಕತೆ ಎಂಬ ಸಂದೇಶವನ್ನು ಪಸರಿಸುವ ದೇಶ. ಇಲ್ಲಿನ ರಾಜಕೀಯ ವ್ಯವಸ್ಥೆ ಬಹುತ್ವವನ್ನು ಒಳಗೊಂಡೇ ಬೆಳೆದಿದೆ. ಈ ಬಹುತ್ವದ ಬೇರನ್ನು ಕಿತ್ತೊಗೆದು ಏಕಪಕ್ಷೀಯ ವ್ಯವಸ್ಥೆಯನ್ನು ತರುವ ಪ್ರಯತ್ನ ನಡೆದಿದ್ದರೂ ಕಾಂಗ್ರೆಸ್ ಮಾತ್ರ ಮರಳಿ ತನ್ನ ಬೇರುಗಳನ್ನು ವಿಸ್ತರಿಸಿ ಹೆಬ್ಬಾಲವಾಗಿ ಬೆಳೆಯುತ್ತಿದೆ. ದಕ್ಷಿಣದಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಅಭೂತಪೂರ್ವವಾಗಿ ಅಧಿಕಾರ ಸ್ಥಾಪಿಸಿಕೊಂಡಿರುವ ಕಾಂಗ್ರೆಸ್, ತನ್ನ ವಿರೋಧಿಗಳೂ ಹುಬ್ಬೇರುವಂತೆ ಬೆಳೆಯುತ್ತಿರುವುದನ್ನು ಇತಿಹಾಸದ ಮರುಕಳಿಸುವಿಕೆ ಎನ್ನಬಹುದು. ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನದಂದು ಈ ಅತಿ ದೊಡ್ಡ ಸಂಘಟನೆಯ ವೇಗವಾದ ವಿಸ್ತರಣೆಗೆ ಮರು ವ್ಯಾಖ್ಯಾನ ದೊರೆಯುತ್ತಿರುವುದನ್ನು ಅವಲೋಕಿಸಬೇಕಿದೆ.

1885ರ ಡಿಸೆಂಬರ್ 28ರಂದು ಮುಂಬೈಯಲ್ಲಿ ಮೊಟ್ಟ ಮೊದಲ ಸಮಾವೇಶ ನಡೆದಾಗ ಇದೊಂದು ದೊಡ್ಡ ಸಂಘಟನೆಯಾಗಿ ಜನರನ್ನು ತಲುಪಲಿದೆ ಎಂಬ ನಿರೀಕ್ಷೆ ಹೆಚ್ಚಿನವರಲ್ಲಿ ಇರಲಿಲ್ಲ. ದೇಶದ ಸ್ವಾತಂತ್ರ್ಯ ಹಾಗೂ ಜನರ ಬದುಕಿನ ಗುಣಮಟ್ಟವನ್ನು ಉತ್ತಮಪಡಿಸುವ ಕಾಳಜಿಯಷ್ಟೇ ಆಗ ಎಲ್ಲ ನಾಯಕರ ಕಣ್ಣ ಮುಂದೆ ಇತ್ತು. ನಂತರದ ವರ್ಷಗಳಲ್ಲಿ ಕಾಂಗ್ರೆಸ್ ವಿಸ್ತರಿಸುತ್ತಾ ಹೋದಂತೆ ಜನರಲ್ಲಿ ಪಕ್ಷದ ಬಗ್ಗೆ, ಅಪಾರ ವಿಶ್ವಾಸ ಮೂಡಿತು. ಸ್ವಾತಂತ್ರ್ಯ ಹೋರಾಟಗಳಲ್ಲಿ ಭಾಗಿ, ಸಾಮಾಜಿಕ ಸಮಾನತೆ, ಕಂದಾಚಾರ ನಿವಾರಣೆ ಮೊದಲಾದ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಿದ್ದರಿಂದ ಇದು ನಮ್ಮದೇ ಪಕ್ಷ ಎಂಬ ನಂಬಿಕೆ ಜನರಲ್ಲಿ ಮೂಡಿತು. ಪಂಡಿತ್ ಜವಾಹರಲಾಲ್ ನೆಹರೂ ಪ್ರಧಾನಿಯಾದಾಗಲಂತೂ ಭಾರತ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆಯಿತು.

ನಂತರ ಇಂದಿರಾ ಗಾಂಧಿಯವರ ಕಾಲದಲ್ಲಿ ‘ಇಂಡಿಯಾ ಎಂದರೆ ಇಂದಿರಾ’ ಎಂಬ ಮಾತು ಜನಜನಿತವಾಗಿತ್ತು. ಈ ನಡುವೆ ಅನೇಕ ಏಳು-ಬೀಳುಗಳು ಕಂಡು ಪಕ್ಷಕ್ಕೆ ಹಿನ್ನಡೆಯಾಗಿದ್ದು ನಿಜ. ಆದರೆ, ಆಗಿನ ಯುವ ನಾಯಕ ರಾಜೀವ್ ಗಾಂಧಿ ದೇಶಕ್ಕೆ ಹೊಸ ಭರವಸೆಯನ್ನು ಮೂಡಿಸಿ ರಾಜಕೀಯ ವ್ಯವಸ್ಥೆಯ ಸುಧಾರಣೆಗೆ ಹೊಸ ನೋಟ ತಂದರು. ದೇಶದೆಲ್ಲೆಡೆ ಓಡಾಡಿ ದೇಶದ ಪ್ರಗತಿಯ ದಿಕ್ಕನ್ನು ಬದಲಿಸುವ ಆಶ್ವಾಸನೆಯನ್ನು ಜನರ ಮನಸ್ಸಿನಲ್ಲಿ ಮೂಡಿಸಿದರು.

ಮರುಕಳಿಸಿದ ಚರಿತ್ರೆ:

ಆಗಲೇ ಹೇಳಿದಂತೆ ಈ ಇತಿಹಾಸ ಮರುಕಳಿಸಿದೆ. ರಾಜೀವ್ ಗಾಂಧಿಯವರ ಮಗ ರಾಹುಲ್ ಗಾಂಧಿ ‘ಭಾರತ್ ಜೋಡೊ’ ಯಾತ್ರೆಯ ಮೂಲಕ ಆ ಭರವಸೆಯನ್ನು ಮತ್ತೆ ಜನರ ಹೃದಯಗಳಲ್ಲಿ ನೆಲೆ ಮಾಡಿದರು. ಈ ಕುರಿತು ವಿರೋಧ ಪಕ್ಷಗಳಿಂದ ಎಷ್ಟೇ ಟೀಕೆ ಬಂದರೂ ಕೊನೆಗೆ ಜನರು ಕಾಂಗ್ರೆಸ್‌ನ ಕೈ ಹಿಡಿದರು. ಇತ್ತೀಚೆಗೆ ತೆಲಂಗಾಣದಲ್ಲೂ ಇದೇ ರೀತಿ ಚರಿತ್ರಾರ್ಹ ದಾಖಲೆಯಾಗಿದೆ. ಅಂದು ರಾಜೀವ್ ಗಾಂಧಿಯವರಂತಹ ನಾಯಕರು ಜನರ ಮನಸ್ಸುಗಳನ್ನು ಹೇಗೆ ಜೋಡಿಸಿದರೋ ಈಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೊದಲಾದ ನಾಯಕರು ಜನರ ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡುತ್ತಿದ್ದಾರೆ.

ರಾಜಕೀಯದಲ್ಲಿ ಜನರ ಮನಸ್ಸನ್ನು ಗೆಲ್ಲುವ ಬಹಳ ಸುಲಭ ವಿಧಾನ ಎಂದರೆ, ನಿಷ್ಕಲ್ಮಶವಾಗಿ ಅವರ ಮನಸ್ಸುಗಳನ್ನು ಒಂದು ಮಾಡುವುದು. ಕಾಂಗ್ರೆಸ್ ಜನರ ಮನಸ್ಸಿನ ಒಳನೋಟ ಅರಿತು ಈ ಕಾರ್ಯಕ್ಕೆ ಕೈ ಹಾಕಿದ್ದು ಹಾಗೂ ಬೆಲೆ ಏರಿಕೆಯಿಂದ ನೊಂದ ಜನರಿಗೆ ನೇರವಾಗಿ ಲಾಭ ತಲುಪಿಸುವ ಗ್ಯಾರಂಟಿಗಳ ಆಶ್ವಾಸನೆ ನೀಡಿದ್ದರ ಪರಿಣಾಮ ಜನರು ಮನಃಪೂರ್ವಕವಾಗಿ ಪಕ್ಷಕ್ಕೆ ಬೆಂಬಲಿಸಿದರು. ಇದರ ಜೊತೆಗೆ ಹಿಂದಿನ ಭ್ರಷ್ಟ ಸರಕಾರದ ವಿರುದ್ಧ ಜನರು ಸಿಡಿದೆದ್ದಿದ್ದು, ನಮ್ಮ ತರುಣ ಕಾರ್ಯಕರ್ತರು ಅತ್ಯುತ್ಸಾಹದಿಂದ ಮನೆಮನೆಗೆ ತಲುಪಿ ದುರಾಡಳಿತವನ್ನು ಮುಗಿಸಲು ಬೆಂಬಲ ಕೋರಿದ್ದನ್ನು ಇಲ್ಲಿ ಸ್ಮರಿಸಬೇಕು. ಸಂಸ್ಥಾಪನಾ ದಿನದ ಈ ಶುಭ ಸಂದರ್ಭದಲ್ಲಿ ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ‘ದೇಶಕ್ಕೆ ದೇಣಿಗೆ ನೀಡಿ’ ಅಭಿಯಾನ ಆರಂಭಿಸಿದ್ದು, ಕನಿಷ್ಠ 138 ರೂ., 1,380 ರೂ. ಮತ್ತು 13,800 ರೂ.ಯಂತೆ ದೇಣಿಗೆ ನೀಡಬಹುದು. ಈ ಮೂಲಕ ಪಕ್ಷದ ಪ್ರಗತಿಯಲ್ಲಿ ಜನರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಇದು ಮಹಾತ್ಮಾ ಗಾಂಧೀಜಿಯವರಿಂದ ದೊರೆತ ಪ್ರೇರಣೆ.

ಕಾಂಗ್ರೆಸ್ ಮಾಡಿದ್ದೇನು?

ಸ್ವಾತಂತ್ರ್ಯದ ನಂತರದಿಂದ ಆರಂಭವಾಗಿ 2014 ರವರೆಗೆ ಬಹುತೇಕ ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶಕ್ಕೇನು ಮಾಡಿದೆ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳು ಕೇಳುತ್ತಿವೆ. 2004-2014ರ ಅವಧಿಯಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರ, ಉದ್ಯೋಗ ಖಾತರಿ ಮೂಲಕ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಕೆಲಸ ನೀಡಿತು. ಒಂದು ಅಧ್ಯಯನದ ಪ್ರಕಾರ ಈ ಮಹತ್ವದ ಕ್ರಮದಿಂದ 2004-05 ರಿಂದ 2011-12ರವರೆಗೆ ಬಡತನದ ಪ್ರಮಾಣ ಶೇ.32 ರಷ್ಟು ಕಡಿಮೆಯಾಗಿ, 14 ಕೋಟಿ ಜನರು ಬಡತನದ ಕೂಪಕ್ಕೆ ತಳ್ಳುವುದನ್ನು ತಡೆದಿತ್ತು. ಜನರ ಹಸಿವು ನೀಗಿಸುವ ಐತಿಹಾಸಿಕವಾದ ಆಹಾರ ಭದ್ರತಾ ಕಾಯ್ದೆಯಿಂದ ಆಹಾರ ಧಾನ್ಯಗಳ ಪಡಿತರ ವಿತರಣೆ ಜಾರಿಗೆ ಬಂತು. ವಿಶೇಷ ಆರ್ಥಿಕ ವಲಯಗಳ ಕಾಯ್ದೆಯಿಂದಾಗಿ 2012-13ನೇ ಸಾಲಿನಲ್ಲಿ ಈ ವಲಯಗಳಲ್ಲಿ ರಫ್ತು ಪ್ರಮಾಣ ಶೇ.31ರಷ್ಟು ಏರಿಕೆಯಾಗಿತ್ತು. ಆರ್‌ಟಿಐ ಕಾಯ್ದೆ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತಂದರೆ ಆರ್‌ಟಿಇ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಕಲಿಕೆಯ ವಿಶೇಷ ಹಕ್ಕನ್ನು ನೀಡಿತು. ವಿರೋಧ ಪಕ್ಷಗಳು ಅಂದು ವಿರೋಧಿಸಿ ಇಂದು ಅನುಸರಿಸುತ್ತಿರುವ ಆಧಾರ್ ಗುರುತಿನ ವ್ಯವಸ್ಥೆಯನ್ನು ತಂದಿದ್ದೂ ಯುಪಿಎ ಸರಕಾರ.

ಸಂವಿಧಾನದ ಉಳಿವಿಗೆ ಕಾಂಗ್ರೆಸ್

ಜಾತ್ಯತೀತತೆ, ಸಮಾನತೆ, ಸಾರ್ವಭೌಮತೆ ಮೊದಲಾದ ಆಶಯಗಳು ಸೇರಿದಂತೆ ಸಂವಿಧಾನವನ್ನು ಕಾಪಾಡುವ ಉದ್ದೇಶದಿಂದ ಕಾಂಗ್ರೆಸ್ ತನ್ನ ಬಲವನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದೆ. ಹೊಸ ಕಾಲದಲ್ಲಿ ಹೊಸ ಸವಾಲುಗಳನ್ನೆದುರಿಸುತ್ತಾ ಬಡವರು, ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಭವಿಷ್ಯ ಕಟ್ಟಿಕೊಡುವ ಸಂಕಲ್ಪದೊಂದಿಗೆ ಪಕ್ಷ ಮುನ್ನಡೆಯುತ್ತಿದೆ. ಜಾತಿ ಹಾಗೂ ಧರ್ಮಗಳ ಆಧಾರದಲ್ಲಿ ಮನಸ್ಸುಗಳನ್ನು ಮುರಿದು ದ್ವೇಷವನ್ನು ಬಿತ್ತುವವರ ನಡುವೆ ಪ್ರೀತಿಯನ್ನು ಹಂಚುವ ಸಮಾಜ ಕಾರ್ಯದ ಮಹತ್ತರ ಹೊಣೆ ಕಾಂಗ್ರೆಸ್ ಪಕ್ಷಕ್ಕಿದೆ. ಇದಕ್ಕಾಗಿ ನಮ್ಮ ಪಕ್ಷಕ್ಕೆ ಸ್ಫೂರ್ತಿಯಾಗಿ ಇರುವುದು ಜನರ ಬೆಂಬಲ ಹಾಗೂ ಇತಿಹಾಸದಲ್ಲಿ ಹಿರಿಯ ನಾಯಕರು ಇಟ್ಟ ಹಿಂದಿನ ಹೆಜ್ಜೆಗಳ ಮಾದರಿ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಇನ್ನಷ್ಟು ಜನಹಿತ ದೃಷ್ಟಿಯಿಂದ ಕೆಲಸ ಮಾಡಲಿದ್ದು, ನುಡಿದಂತೆ ನಡೆಯುವ ಆಶಯವನ್ನು ಗಟ್ಟಿಗೊಳಿಸಲಿದ್ದಾರೆ.

ಪ್ರಜಾಪ್ರಭುತ್ವವು ಕೇವಲ ಸರಕಾರದ ಒಂದು ರೂಪವಲ್ಲ. ಅದು ಮೂಲಭೂತವಾಗಿ ಸಮಾಜದ ಪ್ರತಿಯೊಬ್ಬರೂ ಪರಸ್ಪರರಿಗೆ ತೋರುವ ಗೌರವಾದರ ಭಾವನೆ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಇಂತಹ ವ್ಯವಸ್ಥೆಯನ್ನು ಕಟ್ಟಿಕೊಡುವ ಹಾಗೂ ಈ ವ್ಯವಸ್ಥೆಗೆ ಧಕ್ಕೆಯಾಗದಂತೆ ಕಾಪಾಡುವ ಹೊಣೆಯನ್ನು ಕಾಂಗ್ರೆಸ್ ಹೊತ್ತುಕೊಂಡಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನವೆಂದರೆ ಕೇವಲ ವಾರ್ಷಿಕ ಆಚರಣೆಯಲ್ಲ. ಅದು ಪ್ರಜಾತಂತ್ರದ ಆಶಯಗಳನ್ನು ಎತ್ತಿ ಹಿಡಿಯುವ ಸಂಭ್ರಮ.

share
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Next Story
X