ಬೆಳ್ತಂಗಡಿ; ಲಾರಿ ಢಿಕ್ಕಿ: ಬೈಕ್ ಸವಾರರಿಬ್ಬರು ಮೃತ್ಯು
ಬೆಳ್ತಂಗಡಿ : ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಸಮೀಪ ಸೋಮವಾರ ರಾತ್ರಿ ನಡೆದಿದೆ.
ಗುರುವಾಯನಕೆರೆ ನಿವಾಸಿ ಅಶ್ರಫ್ ಎಂಬವರ ಪುತ್ರ ಅಶ್ಫಾನ್ ಹಾಗು ನಾವೂರು ನಿವಾಸಿ ಮಿಸ್ಬಾ ಮೃತ ಯುವಕರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story