ಮಂಗಳೂರು: ಮತದಾರರ ಜಾಗೃತಿ ಸ್ಪರ್ಧೆಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ (PTI)
ಮಂಗಳೂರು: 2022ರ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಭಾರತ ಚುಣಾವಣಾ ಆಯೋಗವು ಪ್ರತಿ ಮತದ ಮಹತ್ವವನ್ನು ಸೃಜನಾತ್ಮಕ ಅಭಿವ್ಯಕ್ತಿಯ ಮೂಲಕ ಪುನರುಚ್ಛರಿಸಲು ನನ್ನ ಮತ ನನ್ನ ಭವಿಷ್ಯ ಒಂದು ಮತದ ಶಕ್ತಿ ಎಂಬ ರ್ಶೀಕೆಯಡಿ ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಯನ್ನು ಆಯೋಜಿಸಿದೆ.
ಪೋಸ್ಟರ್ ವಿನ್ಯಾಸ, ಹಾಡು, ಡಿಯೋ ತಯಾರಿ, ಸ್ಲೋಗನ್ ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಆಸಕ್ತರು https://ecisveep.nic.in/contest/ಲಾಗಿನ್ ಆಗಿ ಮಾ.15ರೊಳಗೆ voter-contest@eci.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story