ಕಿನ್ಯ: ಬಾವಿಗೆ ಬಿದ್ದ ಕಡವೆಯ ರಕ್ಷಣೆ
ಉಳ್ಳಾಲ: ಕಾಡಿನಿಂದ ಬಂದ ಕಡವೆಯೊಂದು ಮಸೀದಿ ಬಾವಿಗೆ ಬಿದ್ದ ಘಟನೆ ಶುಕ್ರವಾರ ಕಿನ್ಯ ಗ್ರಾಮದ ಉಕ್ಕುಡದಲ್ಲಿ ನಡೆದಿದೆ.
ಕಡವೆಯೊಂದು ಮಸೀದಿ ಸಮೀಪದ ಬಾವಿಗೆ ಬಿದ್ದ ಘಟನೆ ನಡೆದಿದ್ದು, ನಂತರ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಡವೆಯನ್ನು ರಕ್ಷಿಸಿದ್ದಾರೆ. ಅರಣ್ಯ ಇಲಾಖಾಧಿಕಾರಿಗಳು ಕಡವೆಗೆ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟಿದ್ದಾರೆ.
ಮಸೀದಿಗೆ ಬಂದಿದ್ದ ಸ್ಥಳೀಯರು ಕಡವೆಯೊಂದು ಮಸೀದಿ ಬಾವಿಗೆ ಬಿದ್ದಿರುವುದನ್ನು ಗಮನಿಸಿ ಅರಣ್ಯ ಇಲಾಖೆ, ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಕಡವೆಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಮಾರ್ಗದರ್ಶನದಲ್ಲಿ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ, ಅರಣ್ಯ ರಕ್ಷಕಿ ಸೌಮ್ಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story