Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್: ಮಾರುಕಟ್ಟೆ ಎದುರಲ್ಲೇ...

ಸುರತ್ಕಲ್: ಮಾರುಕಟ್ಟೆ ಎದುರಲ್ಲೇ ತ್ಯಾಜ್ಯ ಸುರಿಯುತ್ತಿರುವ ಆ್ಯಂಟನಿ ಸಂಸ್ಥೆ

► ಮನಪಾದಿಂದ ನಿರ್ಲಕ್ಷ ► ಸ್ವಚ್ಛ ಭಾರತದ ಪರಿಕಲ್ಪನೆಯ ಅಣಕ ► ದುರ್ವಾಸನೆಯಿಂದ ಗ್ರಾಹಕರು ಮಾರುಕಟ್ಟೆಗೆ ಬರಲು ಹಿಂದೇಟು

ರಹ್ಮಾನ್ ಹಳೆಯಂಗಡಿರಹ್ಮಾನ್ ಹಳೆಯಂಗಡಿ20 April 2022 3:15 PM IST
share
ಸುರತ್ಕಲ್: ಮಾರುಕಟ್ಟೆ ಎದುರಲ್ಲೇ ತ್ಯಾಜ್ಯ ಸುರಿಯುತ್ತಿರುವ ಆ್ಯಂಟನಿ ಸಂಸ್ಥೆ

ಸುರತ್ಕಲ್: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ವಿಭಾಗದ ತ್ಯಾಜ್ಯವನ್ನು ಜನವಸತಿ ಪ್ರದೇಶ ಹಾಗೂ ಮುಡಾ ಮಾರುಕಟ್ಟೆಯ ಮುಂದೆಯೇ ಸುರಿಯುತ್ತಿದ್ದು, ಸ್ವಚ್ಛ ಭಾರತದ ಪರಿಕಲ್ಪನೆಯನ್ನೇ ಅಣುಕಿಸುವಂತಿದೆ.

ಸುರತ್ಕಲ್ ಮೂಡ ಮಾರುಕಟ್ಟೆಯ ಕೋಳಿ ಮಾರುಕಟ್ಟೆ ಬಳಿ ಪ್ರತಿದಿನ ತ್ಯಾಜ್ಯವನ್ನು ತಂದು ಸುರಿಯಲಾಗುತ್ತಿದೆ. ತ್ಯಾಜ್ಯದ ನೀರು ರಸ್ತೆ ತುಂಬೆಲ್ಲ ಹರಿದು ವಾಸನೆ ಬರುತ್ತಿದ್ದು, ತ್ಯಾಜ್ಯವನ್ನು ಕೋಳಿ ಮಾಂಸದ ಮಾರುಕಟ್ಟೆಯ ದ್ವಾರದ ಬಳಿಯೇ ಸುರಿಯುತ್ತಿರುವುದರಿಂದ ಗ್ರಾಹಕರು ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಒಂದೆಡೆ ಸ್ವಚ್ಛ ಭಾರತದ ಪರಿಕಲ್ಪನೆಗೆ ತದ್ವಿರುದ್ಧವಾಗಿದ್ದರೆ, ಇನ್ನೊಂದೆಡೆ ಆರೋಗ್ಯ ಸಮಸ್ಯೆಗಳಿಗೆ ಘನತ್ಯಾಜ್ಯ ಶೇಖರಣೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪವಾಗಿದೆ.

ಈ ಮೊದಲು ತ್ಯಾಜ್ಯವನ್ನು ಸುರತ್ಕಲ್ ಸೇಕ್ರೆಡ್ ಹಾರ್ಟ್ ಚರ್ಚ್‌ಗೆ ಹೋಗುವ ರಸ್ತೆ ಬದಿ ಸುರಿಯಲಾಗುತ್ತಿತ್ತು. ಆ ಬಳಿಕ ಅದನ್ನು ಮಾರುಕಟ್ಟೆ ರಸ್ತೆಗೆ ವರ್ಗಾಯಿಸಲಾಯಿತು. ಈ ವೇಳೆ ಅಲ್ಲಿನ ಅಪಾರ್ಟ್ಮೆಂಟ್‌ಗಳ ನಿವಾಸಿಗಳು ಮಹಾನಗರ ಪಾಲಿಕೆಗೆ ದೂರು ನೀಡಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತ್ಯಾಜ್ಯವನ್ನು ಮುಡಾ ಮಾರುಕಟ್ಟೆಯ ಕೋಳಿ ಅಂಗಡಿಗಳ ದ್ವಾರದ ಬಳಿ ಸುರಿಯ ಲಾಗುತ್ತಿದೆ ಎಂದು ವ್ಯಾಪಾರಿಗಳು ದೂರಿದ್ದಾರೆ.

ಘನ ತ್ಯಾಜ್ಯ ಸಂಗ್ರಹಿಸುವ ಸ್ಥಳದಿಂದ 20-30 ಅಡಿ ಅಂತರದಲ್ಲಿ ಒಂದು ಖಾಸಗಿ ಆಸ್ಪತ್ರೆ ಮತ್ತು ಇನ್ನೊಂದು ಭಾಗದಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯಾಚರಿಸುತ್ತಿದೆ. ಅಲ್ಲದೆ, ಒಂದು ಭಾಗದಲ್ಲಿ ದಿನಸಿ ಅಂಗಡಿ ಕಾರ್ಯಾಚರಿಸುತ್ತಿದ್ದರೆ, ತ್ಯಾಜ್ಯದ ವಾಸನೆ ಯುಕ್ತ ನೀರು ಹರಿಯುವ ರಸ್ತೆಯ ಬದಿಯಲ್ಲೇ ಪಾನ್ ಮಸಾಲದ ಅಂಗಡಿಗಳು, ಎಳನೀರಿನ ಅಂಗಡಿ ಸಹಿತ ಕ್ಯಾಂಟೀನ್ ಹೊಟೇಲ್‌ಗಳು ಕಾರ್ಯಾಚರಿಸುತ್ತಿವೆ.

'ತ್ಯಾಜ್ಯ ಸುರಿಯುತ್ತಿರುವುದರಿಂದ ವ್ಯಾಪಾರಕ್ಕೆ ತೊಂದರೆ ಯಾಗುತ್ತಿದೆ. ಗ್ರಾಹಕರು ಬರುತ್ತಿಲ್ಲ. ಮಹಾನಗರ ಪಾಲಿಕೆಯ ಸುರತ್ಕಲ್ ವಿಭಾಗ ಕಚೇರಿ ಹಾಗೂ ತ್ಯಾಜ್ಯ ವಿಲೇವಾರಿಯ ಗುತ್ತಿಗೆ ಪಡೆದಿರುವ ಆ್ಯಂಟನಿ ಸಂಸ್ಥೆಗೆ ಹಲವು ಬಾರಿ ದೂರು ನೀಡಿದರೂ ಯಾರೊಬ್ಬರೂ ಕ್ರಮಕ್ಕೆ ಮುಂದಾಗಿಲ್ಲ. ಘನತ್ಯಾಜ್ಯವನ್ನು ಇಲ್ಲೇ ಶೇಖರಿಸಲಾಗುತ್ತಿದೆ ಎಂದು ಕರಾವಳಿ ಕೋಳಿ ಮಾರಾಟಗಾರರ ಸಂಘದ ಅಧ್ಯಕ್ಷ ಹಾಗೂ ಮುಡಾ ಮಾರುಕಟ್ಟೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿರುವ ಬಶೀರ್ ಆರೋಪಿಸಿದ್ದಾರೆ. ಕೋಳಿ ಮಾಂಸದ ಮಾರುಕಟ್ಟೆಗೆ ಬರುವ ಗ್ರಾಹಕರು ವಾಹನ ನಿಲ್ಲಿಸಲೂ ಅವಕಾಶವಿಲ್ಲದೆ ಪರದಾಡುವಂತಾಗಿದೆ ಎಂದು ಗ್ರಾಹಕರೊಬ್ಬರು ಅಸಮಾಧಾನ ವ್ಯಕ್ತ ಪಡಿಸಿದರು.

'ನಾನು ಅಂಗವಿಕಲ. ನನ್ನ ಸಂಸಾರ ಸಲಹಲು ಇರುವ ಗೂಡಂಗಡಿ ಪಕ್ಕದಲ್ಲೇ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಸುರತ್ಕಲ್‌ನ ಸಂಪೂರ್ಣ ತ್ಯಾಜ್ಯವನ್ನು ಸುರಿಯುತ್ತಾರೆ. ವಾಸನೆ, ನೊಣಗಳ ಉಪಟಳ, ಪಾರ್ಕಿಂ ಗ್‌ಗೆ ಸ್ಥಳಾವಕಾಶ ಇಲ್ಲದಿರುವುದರಿಂದ ಗ್ರಾಹಕರೇ ಬರುತ್ತಿಲ್ಲ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ನಾನೂ ಸಹಿತ ಮಾರುಕಟ್ಟೆಯ ನೂರಕ್ಕೂ ಅಧಿಕ ಅಂಗಡಿಗಳು ಬಾಗಿಲು ಹಾಕಬೇಕಾದ ಪರಿಸ್ಥಿತಿ ಇದೆ'ಎಂದು ರವೀಂದ್ರ ಶೆಟ್ಟಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ತಕ್ಷಣ ಮನಪಾ ಮತ್ತು ಆರೋಗ್ಯ ಇಲಾಖೆ ಜನ ಪ್ರತಿನಿಧಿಗಳು ಎಚ್ಚೆತ್ತುಕೊಂಡು ಘನ ತ್ಯಾಜ್ಯ ಸಂಗ್ರಹಕ್ಕೆ ಸೂಕ್ತ ಸ್ಥಳದ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಂಗಳೂರು ಮನಪಾವು ಸ್ಮಾರ್ಟ್ ಸಿಟಿಯ ಬಗ್ಗೆ ಮಾತನಾಡುತ್ತಿದ್ದು, ಅದು ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾದಂತಿದೆ. ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕಿರುವ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಇಲಾಖೆಗೆ ಎಷ್ಟೇ ಮನವಿ ಮಾಡಿಕೊಂಡರೂ ಕ್ಯಾರೇ ಅನ್ನುತ್ತಿಲ್ಲ.

ರವೀಂದ್ರ ಶೆಟ್ಟಿ, ಗೂಡಂಗಡಿ ಮಾಲಕ

ಹೊಸ ಮಾರುಕಟ್ಟೆ ಅಧ್ಯಕ್ಷರು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಕ್ರು ಕೈಗೊಳ್ಳುವಂತೆ ಕಮಿಷನರ್‌ಗೆ ಸೂಚಿಸಲಾಗಿದೆ. ತ್ಯಾಜ್ಯ ಸಾಗಾಟದ ದೊಡ್ಡ ವಾಹನ ಬಂದು ನಿಂತ ಬಳಿಕ ವಾಹನಕ್ಕೆ ನೇರವಾಗಿ ತ್ಯಾಜ್ಯವನ್ನು ವರ್ಗಾಯಿಸಲು ಸೂಚಿಸಲಾಗಿದೆ. ನಾಳೆ ಕಾರ್ಪೊರೇಟರ್‌ಗಳು ಮತ್ತೆ ಪರಿಶೀಲಿಸಲಿದ್ದಾರೆ.

ಡಾ.ಭರತ್ ಶೆಟ್ಟಿ, ಶಾಸಕ ಮಂಗಳೂರು ಉತ್ತರ

share
ರಹ್ಮಾನ್ ಹಳೆಯಂಗಡಿ
ರಹ್ಮಾನ್ ಹಳೆಯಂಗಡಿ
Next Story
X