ಪುತ್ತೂರು: ಟಿಪ್ಪರ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
ಸಿನಾನ್
ಪುತ್ತೂರು: ಸ್ಕೂಟರೊಂದಕ್ಕೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ಸ್ಕೂಟರ್ ಸವಾರನನ್ನು ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆದಂ ಕುಂಞಿ ಎಂಬವರ ಪುತ್ರ ಸಿನಾನ್ (18) ಎಂದು ಗುರುತಿಸಲಾಗಿದೆ.
ಸಹ ಸವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ ಕುಂಞಿಚ್ಚರವ ಪುತ್ರ ಆಸಿಫ್ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಾನಕುಮಾರಿ ಭೇಟಿ ನೀಡಿದ್ದು ಇಲ್ಲಿನ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ
Next Story