ಪುತ್ತೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸಹಸವಾರೆ ಮೃತ್ಯು
ಪುತ್ತೂರು: ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಸಹಸವಾರೆ ಮೃತಪಟ್ಟ ಘಟನೆ ಪೆರ್ನೆ ಎಂಬಲ್ಲಿ ಶನಿವಾರ ನಡೆದಿದೆ.
ಪುತ್ತೂರು ನಗರದ ಹಾರಾಡಿಯಲ್ಲಿರು ಪ್ರಜ್ವಲ್ ಸ್ಟೋರ್ಸ್ ನ ಮಾಲಕ ನೆಕ್ಕಿಲಾಡಿ ನಿವಾಸಿ ಬಾಲಕೃಷ್ಣ ಭಟ್ ಎಂಬವರ ಪತ್ನಿ ಪೂರ್ಣಿಮಾ (47 ) ಮೃತರು ಎಂದು ಗುರುತಿಸಲಾಗಿದೆ.
ಬಾಲಕೃಷ್ಣ ದಂಪತಿ ಪೆರ್ನೆಯಲ್ಲಿರು ತಮ್ಮ ತೋಟಕ್ಕೆ ಹೋಗಿದ್ದರು. ಅಲ್ಲಿಂದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದಿದ್ದು, ಪೂರ್ಣಿಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.
ಈ ವೇಳೆ ಆಲಂಕಾರು ಕಡೆಗೆ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆಗಮಿಸಿದ್ದು, ವಾಹನದಿಂದ ಇಳಿದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story