ಮಂಗಳೂರು: ಜೂ. 22ರಂದು ವಿದ್ಯುತ್ ಸಂಪರ್ಕ ಕಡಿತ
ಮಂಗಳೂರು: ಮೂಡುಬಿದಿರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಜೂ.೨೨ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಝಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕುದ್ರೋಳಿ: ಜೂ.೨೨ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ದೇವಸ್ಥಾನ ರಸ್ತೆ, ಕಾರ್ಪೋರೇಶನ್ ಬ್ಯಾಂಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಬಿಜೈ: ಜೂ.೨೨ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಬಿಜೈ ಮೈನ್ ರೋಡ್, ಕೆಎಸ್ಸಾರ್ಟಿಸಿ ಹತ್ತಿರ, ಬಿಜೈ ಚರ್ಚ್ ರಸ್ತೆ, ಬಿಜೈ ನ್ಯೂ ರಸ್ತೆ, ಸಂಕೈಗುಡ್ಡ, ಗ್ಯಾಸ್ ಗೋಡೌನ್, ಎಂಸಿಎಫ್ ಕಾಲನಿ, ಆನೆಗುಂಡಿ, ಬಟ್ಟಗುಡ್ಡ, ಬಿಜೈ ಮ್ಯೂಸಿಯಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ನೆಹರೂ ಮೈದಾನ: ಜೂ.೨೩ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಎಬಿ ಶೆಟ್ಟಿ ಸರ್ಕಲ್, ಭಾರತೀಯ ವಿದ್ಯಾಭವನ, ಎಸ್ಪಿ ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂ ರಸ್ತೆ, ಅಮೃತನಗರ, ರೋಸಾರಿಯೋ ಚರ್ಚ್ ರೋಡ್, ಪೊಲೀಸ್ ಲೇನ್, ಪಿಡಬ್ಲ್ಯುಡಿ., ಕಮರ್ಷಿಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಂವಿ ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ಧೂಮಪ್ಪಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.