ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಅಮಾಸೆಬೈಲು: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಹೊಸಂಗಡಿ ಗ್ರಾಮದ ಕೆರೆಕಟ್ಟೆ ಅಬ್ಬಿಮಕ್ಕೆ ಎಂಬಲ್ಲಿ ಜೂ.೨೪ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಸವಾರ ಐಟಿಐ ವಿದ್ಯಾರ್ಥಿ ಸೃಜನ್ ನಾಯ್ಕ(೧೯) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತ ದಿನಕರ ಜೊತೆ ಬೈಕಿನಲ್ಲಿ ಹೊಸಂಗಡಿ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದು, ಈ ವೇಳೆ ಎದುರಿನಿಂದ ಸಿದ್ದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ, ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅದರಲ್ಲಿ ಗಂಭೀರವಾಗಿ ಗಾಯಗೊಂಡ ಸೃಜನ್ ಸ್ಥಳದಲ್ಲಿಯೇ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story