ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರ: ಅಪಾಯದಂಚಿನಲ್ಲಿ 15ಕ್ಕೂ ಅಧಿಕ ಮನೆಗಳು
ಉಳ್ಳಾಲ, ಜೂ.26: ಮುಂಗಾರು ಮಳೆ ಬಿರುಸುಗೊಳ್ಳುತ್ತಿದ್ದಂತೆ ಉಳ್ಳಾಲ ಸೀ ಗ್ರೌಂಡ್ ಬಳಿ ಕಡಲ್ಕೊರೆತ ತೀವ್ರಗೊಂಡಿದೆ. ಇದರಿಂದ ಇಲ್ಲಿನ ಕಡಲ ಕಿನಾರೆಯ ಸುಮಾರು 15ಕ್ಕೂ ಹೆಚ್ಚು ಮನೆಗಳು ಅಪಾಯದಂಚಿನಲ್ಲಿದ್ದು, ಎರಡು ಮನೆಗಳನ್ನು ಸ್ಥಳಾಂತರಿಸಲಾಗಿದೆ.
ಸಮುದ್ರದ ದೈತ್ಯ ಅಲೆಗಳು ರಸ್ತೆ ಸಮೀಪ ತಲುಪಿದೆ. ಕಡಲ್ಕೊರೆತ ತೀವ್ರಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಆತಂಕಿತರಾಗಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ತಹಶೀಲ್ದಾರ್ ಗುರುಪ್ರಸಾದ್, ಪೌರಾಯುಕ್ತ ವಿದ್ಯಾ, ಗ್ರಾಮಕರಣಿಕ ಪ್ರಮೋದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಸಮುದ್ರ ಪಾಲಾಗಿರುವ ಸೋಮೇಶ್ವರ ಬಟ್ಟಂಪಾಡಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ ಸೀ ಗ್ರೌಂಡ್ ನಲ್ಲಿ ಕಡಲ್ಕೊರೆತ ತೀವ್ರಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಎರಡು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇದರಲ್ಲಿ ಆಗಿರುವ ನಷ್ಟವನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು.
ಗುರುಪ್ರಸಾದ್, ತಹಶೀಲ್ದಾರ್, ಉಳ್ಳಾಲ ತಾಲೂಕು